More

    11ಇ ನಕ್ಷೆ, ಹಕ್ಕುಪತ್ರ ಸಮಸ್ಯೆ ನೀಗಿಸಲು ಯಶ್​ಪಾಲ್​ ಆಗ್ರಹ

    ಉಡುಪಿ: ರಾಜ್ಯಾದ್ಯಂತ ಹಕ್ಕುಪತ್ರದಿಂದ ವಂಚಿತರಾಗಿರುವ ಅರ್ಹ ಬಡ ಕುಟುಂಬಗಳಿಗೆ ಹಕ್ಕುಪತ್ರ ಒದಗಿಸಬೇಕು. ಈ ನಿಟ್ಟಿನಲ್ಲಿ ಈಗ ಚಾಲ್ತಿಯಲ್ಲಿರುವ 2015ಕ್ಕಿಂತ ಪೂರ್ವದ ವಾಸಿಯಾಗಿರುವ ದಾಖಲೆ ಒದಗಿಸುವ ನಿಯಮವನ್ನು 2019ಕ್ಕೆ ಮಾರ್ಪಡಿಸಿ ಸಾವಿರಾರು ಕುಟುಂಬಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೋಮವಾರ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಕಂದಾಯ ಸಚಿವರನ್ನು ಒತ್ತಾಯಿಸಿದರು.
    ಜಿಲ್ಲಾಧಿಕಾರಿ ಉಡುಪಿ ಜಿಲ್ಲೆಗೆ ಮಾತ್ರ ಅನ್ವಯಿಸುವಂತೆ 50 ಸೆಂಟ್ಸ್​ಗಿಂತ ಕಡಿಮೆ ವಿಸ್ತೀರ್ಣದಲ್ಲಿ 11ಇ ನಕ್ಷೆ ಕೊಡಬಾರದೆಂಬ ಆದೇಶ ಹೊರಡಿಸಿದ್ದಾರೆ. ಇದರಿಂದ ಜಿಲ್ಲೆಯ ಜನತೆ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ತಕ್ಷಣ ಈ ಆದೇಶ ಹಿಂಪಡೆಯುವಂತೆ ಆಗ್ರಹಿಸಿದರು.

    ಸಹಕಾರಿ ನ್ಯಾಯಾಲಯ: ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಹಕಾರಿ ಕ್ಷೇತ್ರಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಹಕಾರಿ ಸಂಸ್ಥೆಗಳಲ್ಲಿ ಸರ್ಕಾರ ಖಾತೆ ತೆರೆಯಬೇಕು. ತನ್ಮೂಲಕ ಆರ್ಥಿಕ ಸಹಕಾರ, ಪ್ರತಿ ಜಿಲ್ಲೆಯಲ್ಲಿ ಸಹಕಾರಿ ನ್ಯಾಯಾಲಯ ಸ್ಥಾಪನೆ ಹಾಗೂ ವಿಧಾನ ಪರಿಷತ್​ನಲ್ಲಿ 4 ಸ್ಥಾನಗಳನ್ನು ಸಹಕಾರಿ ಕ್ಷೇತ್ರದ ಪ್ರತಿನಿಧಿಗಳಿಗೆ ಮೀಸಲಿಡಬೇಕು ಎಂದು ಸದನದಲ್ಲಿ ಯಶ್​ಪಾಲ್​ ಪ್ರಸ್ತಾಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts