More

    ರಶ್ಮಿಕಾ-ವಿಜಯ್ ಮದುವೆಯಾದರೆ ದೂರವಾಗುವುದು ಖಚಿತ; ಶಾಕಿಂಗ್​ ಹೇಳಿಕೆ ಕೊಟ್ಟ ಸೆಲೆಬ್ರಿಟಿ ಸ್ವಾಮೀಜಿ

    ಹೈದರಾವಾದ್: ನಟ ವಿಜಯ್​ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬ ವಿಚಾರ ಇತ್ತೀಚಿನ ದಿನಗಳಲ್ಲಿ ತುಸು ಜೋರಾಗಿಯೇ ಕೇಳಿ ಬರುತ್ತಿದ್ದು, ಈ ಇಬ್ಬರು ಲಿವ್​ ಇನ್​ ರಿಲೇಷನ್​ಶಿಪ್​ನಲ್ಲಿದ್ದಾರೆ ಎಂಬ ಮಾತು ಸಹ ಆಗಿಂದಾಗೆ ಕೇಳಿ ಬರುತ್ತಿರುತ್ತವೆ. ಆದರೆ, ಈ ಇಬ್ಬರು ನಾವಿಬ್ಬರು ಬರಿ ಫ್ರೆಂಡ್ಸ್​ ಅಷ್ಟೇ ಎಂದು ಹೇಳುವ ಮೂಲಕ ತಮ್ಮ ಬಗೆಗಿನ ಸುದ್ದಿಗಳನ್ನು ಅಲ್ಲಗಳೆಯುತ್ತಿದ್ದಾರೆ.

    ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಸೆಲೆಬ್ರಿಟಿ ಜ್ಯೋತಿಷಿ ಎಂದೇ ಖ್ಯಾತಿ ಪಡೆದಿರುವಂತಹ ವೇಣು ಸ್ವಾಮಿ ಇದೀಗ ರಶ್ಮಿಕಾ ಹಾಗೂ ವಿಜಯ್​ ದೇವರಕೊಂಡ ಬಗ್ಗೆ ಮಾತನಾಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ರಶ್ಮಿಕಾ ಮಂದಣ್ಣ ತಮ್ಮ ವೃತ್ತಿ ಬದುಕಿನ ಆರಂಭದಲ್ಲಿ ವೇಣು ಸ್ವಾಮಿ ಅವರಿಂದ ವಿಶೇಷ ಪೂಜೆ ಮಾಡಿಸಿದ್ದರು. ಇವರ ಸಲಹೆ ಮೇರೆಗೆ ವರತ್ತಿ ಬದುಕಿನತ್ತ ಹೆಚ್ಚು ಗಮನ ಹರಿಸಿ ಯಶಸ್ಸು ಗಳಿಸಿದ್ದರು ಎಂದು ಹೇಳಲಾಗಿದೆ.

    ಇದನ್ನೂ ಓದಿ: ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಡ್ತಿದ್ದಂತೆ ಸಂಗೀತಾ ಜತೆ ಮಾತಿಗಿಳಿದ ವಿನಯ್​ ಪತ್ನಿ; ಇನ್ನೇನೋ ಆಗೋ ಹಾಗಿದೆ ಗುರು ಎಂದ ನೆಟ್ಟಿಗರು

    ಇತ್ತೀಚಿಗೆ ಖಾಸಗಿ ಚಾನೆಲ್​ ಒಂದರ ಸಂದರ್ಶನದಲ್ಲಿ ಮಾತನಾಡಿದ ವೇಣು ಸ್ವಾಮಿ, ರಶ್ಮಿಕಾ ಹಾಗೂ ವಿಜಯ್ ದೇವರೊಂಡ ಪರಸ್ಪರ ಪ್ರೀತಿಯಲ್ಲಿರುವುದು ಗುಟ್ಟೇನೂ ಅಲ್ಲ. ಅವರಿಬ್ಬರು ವಿವಾಹ ಆಗಲಿದ್ದಾರೆ. ಆದರೆ ವಿವಾಹವಾದ ಬಳಿಕ ಇಬ್ಬರೂ ದೂರಾಗಲಿದ್ದಾರೆ. ಇದು ಖಚಿತ. ವಿಜಯ್ ದೇವರಕೊಂಡ ಜೊತೆ ಮದುವೆಯಾದರೆ ವಿಚ್ಛೇದನ ಆಗಲಿದೆ ಎಂದು ನಾನು ನೇರವಾಗಿ ರಶ್ಮಿಕಾ ಮಂದಣ್ಣ ಅವರಿಗೆ ಹೇಳಿದ್ದೇನೆ. ಇದೇ ಕಾರಣಕ್ಕೆ ಅವರು ನನ್ನೊಂದಿಗೆ ಮಾತನಾಡುವುದು ಬಿಟ್ಟು, ನನ್ನ ಸಂಪರ್ಕ ಕಡಿದುಕೊಂಡಿದ್ದಾರೆ.

    ರಶ್ಮಿಕಾ ಮಂದಣ್ಣ ಸಮಾಜಕ್ಕೆ ನಾಯಕಿ ಆಗಿರಬಹುದು ಆದರೆ ನನಗೆ ಕೇವಲ ಕ್ಲೈಂಟ್ ಅಷ್ಟೆ. ಅವರ ಜನಪ್ರಿಯತೆ ನೋಡಿ ನಾನು ಭವಿಷ್ಯ ಹೇಳುವುದಿಲ್ಲ, ಅವರ ಗ್ರಹಗತಿ ನೋಡಿ ಭವಿಷ್ಯ ಹೇಳುತ್ತೇನೆ. ನಾನು ಹೇಳಿದ ನಿಜ ಅವರಿಗೆ ಹಿಡಿಸಲಿಲ್ಲ, ಇರಲಿ ಪರವಾಗಿಲ್ಲ, ಆದರೆ ಅವರಿಬ್ಬರು ಮದುವೆಯಾಗಿ ದೂರಾಗುವುದು ಖಚಿತ ಎಂದು ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ ನುಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ನೆಟ್ಟಿಗರ ನಡುವೆ ಪರ-ವಿರೋಧದ ಚರ್ಚೆ ಜೋರಾಗಿ ನಡೆಯುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts