More

    19ಕ್ಕೆ ಪ್ರತಿಭಾ ಪುರಸ್ಕಾರ ಸಮಾರಂಭ

    ಗೋಕಾಕ: ಅಖಿಲ ಭಾರತ ವೀರಶೈವ ಮಹಾಸಭಾ ಗೋಕಾಕ ತಾಲೂಕು ಘಟಕದ ವತಿಯಿಂದ ಡಿ.19ರಂದು ಬೆಳಗ್ಗೆ 10 ಗಂಟೆಗೆ ನಗರದ ಕೆಎಲ್‌ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ ಮಗದುಮ್ಮ ಮಾಹಿತಿ ನೀಡಿದ್ದಾರೆ.

    ನಗರದ ಕೆಎಲ್‌ಇ ಸಂಸ್ಥೆಯ ಶಾಲಾ ಆವರಣದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ 110 ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು, ಸಮಾರಂಭದ ಸಾನ್ನಿಧ್ಯವನ್ನು ಗದುಗಿನ ಶಿವಾನಂದ ಬ್ರಹನ್ಮಠದ ಜಗದ್ಗುರು ಸದಾಶಿವಾನಂದಭಾರತಿ ಶ್ರೀ, ಅಧ್ಯಕ್ಷತೆಯನ್ನು ಜಿಲ್ಲಾ ಘಟಕದ ಅಧ್ಯಕ್ಷೆ ಶರಣೆ ರತ್ನಪ್ರಭಾ ಬೆಲ್ಲದ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಭಾಕರ ಕೋರೆ, ಅರುಣಾದೇವಿ ಎಸ್.ವೈ., ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಜಯಾನಂದ ಮುನವಳ್ಳಿ, ಚೇತನ ಅಂಗಡಿ, ಜ್ಯೋತಿ ಬಾವಿಕಟ್ಟಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಗೌರವಾಧ್ಯಕ್ಷ ರಾಜು ಮುನವಳ್ಳಿ ಮಾತನಾಡಿ, ತಾಲೂಕಿನ ಎಲ್ಲ ಪಿಯುಸಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ಗ್ರಂಥಾಲಯ ಪ್ರಾರಂಭಿಸಲಾಗುವುದು.

    ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಗ್ರಂಥಾಲಯದಲ್ಲಿ ಈಗಾಗಲೇ 5 ಸಾವಿರ ವಿಷಯ ಪುಸ್ತಕ ಸಂಗ್ರಹಿಸಿಲಾಗಿದೆ ಎಂದು ತಿಳಿಸಿದರು. ಎಸ್.ಎಂ.ಗಣಾಚಾರಿ, ವಿ.ಎಸ್.ಮಗದುಮ್ಮ, ವಿಶ್ವನಾಥ ಕಡಕೋಳ, ಮಹಾಂತೇಶ ಮಠಪತಿ, ಪ್ರಕಾಶ ಬಾಗೋಜಿ, ಸಿ.ಬಿ.ಗಿಡಣ್ಣವರ, ಬಸವರಾಜ ಹುಳ್ಳೇರ, ವಿಶ್ವನಾಥ ಬೆಲ್ಲದ, ಮಹಾಂತೇಶ ವಾಲಿ, ಮಹಾಂತೇಶ ತಾಂವಶಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts