ಶ್ರೀನಗರ: ಹಿಂದುಗಳ ಪವಿತ್ರ ಕ್ಷೇತ್ರ ಅಮರನಾಥ ಬಳಿ ಇಂದು ಭಾರಿ ಮೇಘಸ್ಫೋಟ ಸಂಭವಿಸಿದ್ದು, ಹಲವರಿಗೆ ಗಾಯಗಳಾಗಿದ್ದು, ಕನಿಷ್ಠ ಹತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಸಾವುನೋವಿನ ಕುರಿತು ಸ್ಪಷ್ಟ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.
ಕಾಶ್ಮೀರದ ಹಿಮಾಲಯದ ದಕ್ಷಿಣ ಭಾಗದಲ್ಲಿ ಸಂಜೆ ಐದೂವರೆಯ ಸುಮಾರಿಗೆ ಸುರಿಯುತ್ತಿದ್ದ ಭಾರಿ ಮಳೆಯ ನಡುವೆಯೇ ಈ ಮೇಘಸ್ಫೋಟ ಸಂಭವಿಸಿದ್ದು, ಹಠಾತ್ ಪ್ರವಾಹ ಸಂಭವಿಸಿ, 25 ಟೆಂಟುಗಳು, ಮೂರು ಕಮ್ಯುನಿಟಿ ಕಿಚನ್ಗಳು ಹಾನಿಗೀಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್, ಸೇನೆ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಲ್ಲದೆ ಹೆಚ್ಚಿನ ಮಾಹಿತಿ ಹಾಗೂ ನೆರವಿಗಾಗಿ ಸಹಾಯವಾಣಿಗಳನ್ನು ತೆರೆಯಲಾಗಿದ್ದು, ಅವು ಇಂತಿವೆ.
- ಎನ್ಡಿಆರ್ಎಫ್: 011-23438252, 011-23438253
- ಕಾಶ್ಮೀರ ವಿಭಾಗೀಯ ಸಹಾಯವಾಣಿ: 0194-2496240
- ಅಮರನಾಥ ಕ್ಷೇತ್ರದ ಸಹಾಯವಾಣಿ: 0194-2313149
ತಂದೆಯನ್ನೇ ಗುಂಡಿಟ್ಟು ಕೊಲ್ಲಿಸಿದ ಮಗಳು; ಅಪ್ಪ ಗಿಫ್ಟ್ ಕೊಟ್ಟಿದ್ದ ವಜ್ರದುಂಗುರವನ್ನೇ ಸುಪಾರಿಯಾಗಿ ನೀಡಿದ್ದಳು!
ರಸ್ತೆ ಪಕ್ಕ ನಿಂತಿದ್ದ ಕಾರಿನ ಮೇಲೇ ಮಗುಚಿ ಬಿದ್ದ ಲಾರಿ, ಕಾರಲ್ಲಿದ್ದ ವ್ಯಕ್ತಿ ಸಾವು..