ಮೈಸೂರು: ರಾಜ್ಯದಲ್ಲಿ ಮತ್ತೆ ಧಾರ್ಮಿಕ ಸಂಘರ್ಷಕ್ಕೆ ಕಾರಣವಾಗುವಂಥ ಪ್ರಕರಣವೊಂದು ನಡೆದಿದೆ. ಸಾಮಾನ್ಯವಾಗಿ ಹಿಂದೂಗಳ ದೇವಸ್ಥಾನಗಳನ್ನು ಗುರಿಯಾಗಿಸಿ ದಾಳಿಗಳು ನಡೆಯುತ್ತವೆ. ಇದೀಗ ಚರ್ಚ್ವೊಂದರ ಮೇಲೂ ದಾಳಿ ನಡೆದಿದ್ದು, ಮೂರ್ತಿಯನ್ನು ಕೂಡ ಒಡೆದು ಹಾಕಲಾಗಿದೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮೊನ್ನೆಯಷ್ಟೇ ಕ್ರಿಸ್ಮಸ್ ನಡೆದಿದ್ದು, ಅದರ ಬೆನ್ನಿಗೇ ಎಂಬಂತೆ ಈ ದಾಳಿ ನಡೆದಿದೆ. ಹಾಡಹಗಲೇ ಚರ್ಚ್ವೊಂದರ ಒಳಗೆ ಯಾರೋ ನುಗ್ಗಿದ್ದು, ಒಳಗಿರುವ ವಸ್ತುಗಳನ್ನು ಚೆಲ್ಲಾಡಿದ್ದಾರೆ.
ಕ್ರಿಸ್ಮಸ್ಗೆ ಚರ್ಚ್ ಒಳಗಿನ ಟೇಬಲ್ಗಳ ಮೇಲೆ ಬುಟ್ಟಿಯಲ್ಲಿ ಬಾಲಯೇಸುವಿನ ಮೂರ್ತಿಯನ್ನು ಇರಿಸಲಾಗಿತ್ತು. ದಾಳಿ ನಡೆಸಿದ ದುಷ್ಕರ್ಮಿಗಳು ಅದನ್ನು ಒಡೆದುಹಾಕಿದ್ದಾರೆ. ಚರ್ಚ್ನಲ್ಲಿ ಯಾರೂ ಇಲ್ಲದ ವೇಳೆ ಈ ದಾಳಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಅರೆಬೆತ್ತಲೆಯಾಗಿ ಎರಡನೇ ಮಹಡಿಗೆ ಹತ್ತಿ ಒಂಟಿ ಮಹಿಳೆ ಇದ್ದ ಮನೆ ಬಾಗಿಲು ಬಡಿದ; ಇಡೀ ಕಟ್ಟಡದಲ್ಲಿ ಯಾರೂ ಇಲ್ಲದಾಗ ಅವಾಂತರ!
ಸರ್ವರೋಗಕ್ಕೂ ಇದೇ ಮದ್ದು!; ಚಿನ್ನಕ್ಕಿಂತಲೂ ದುಬಾರಿ ಈ ವಸ್ತು: ಇದಕ್ಕೆಂದೇ ಚೀನಾದವರು ಭಾರತದೊಳಕ್ಕೆ ನುಗ್ಗಿದ್ದಾರೆ ಹಲವು ಸಲ!