More

    ಕ್ರಿಸ್​ಮಸ್​ ಬೆನ್ನಿಗೇ ಚರ್ಚ್​ ಮೇಲೆ ದಾಳಿ, ಬಾಲಯೇಸು ಮೂರ್ತಿ ಒಡೆದು ಹಾಕಿದ ದುಷ್ಕರ್ಮಿಗಳು!

    ಮೈಸೂರು: ರಾಜ್ಯದಲ್ಲಿ ಮತ್ತೆ ಧಾರ್ಮಿಕ ಸಂಘರ್ಷಕ್ಕೆ ಕಾರಣವಾಗುವಂಥ ಪ್ರಕರಣವೊಂದು ನಡೆದಿದೆ. ಸಾಮಾನ್ಯವಾಗಿ ಹಿಂದೂಗಳ ದೇವಸ್ಥಾನಗಳನ್ನು ಗುರಿಯಾಗಿಸಿ ದಾಳಿಗಳು ನಡೆಯುತ್ತವೆ. ಇದೀಗ ಚರ್ಚ್​ವೊಂದರ ಮೇಲೂ ದಾಳಿ ನಡೆದಿದ್ದು, ಮೂರ್ತಿಯನ್ನು ಕೂಡ ಒಡೆದು ಹಾಕಲಾಗಿದೆ.

    ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮೊನ್ನೆಯಷ್ಟೇ ಕ್ರಿಸ್​ಮಸ್​ ನಡೆದಿದ್ದು, ಅದರ ಬೆನ್ನಿಗೇ ಎಂಬಂತೆ ಈ ದಾಳಿ ನಡೆದಿದೆ. ಹಾಡಹಗಲೇ ಚರ್ಚ್​ವೊಂದರ ಒಳಗೆ ಯಾರೋ ನುಗ್ಗಿದ್ದು, ಒಳಗಿರುವ ವಸ್ತುಗಳನ್ನು ಚೆಲ್ಲಾಡಿದ್ದಾರೆ.

    ಕ್ರಿಸ್​ಮಸ್​ಗೆ ಚರ್ಚ್​ ಒಳಗಿನ ಟೇಬಲ್​ಗಳ ಮೇಲೆ ಬುಟ್ಟಿಯಲ್ಲಿ ಬಾಲಯೇಸುವಿನ ಮೂರ್ತಿಯನ್ನು ಇರಿಸಲಾಗಿತ್ತು. ದಾಳಿ ನಡೆಸಿದ ದುಷ್ಕರ್ಮಿಗಳು ಅದನ್ನು ಒಡೆದುಹಾಕಿದ್ದಾರೆ. ಚರ್ಚ್​​ನಲ್ಲಿ ಯಾರೂ ಇಲ್ಲದ ವೇಳೆ ಈ ದಾಳಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

    ಅರೆಬೆತ್ತಲೆಯಾಗಿ ಎರಡನೇ ಮಹಡಿಗೆ ಹತ್ತಿ ಒಂಟಿ ಮಹಿಳೆ ಇದ್ದ ಮನೆ ಬಾಗಿಲು ಬಡಿದ; ಇಡೀ ಕಟ್ಟಡದಲ್ಲಿ ಯಾರೂ ಇಲ್ಲದಾಗ ಅವಾಂತರ!

    ಸರ್ವರೋಗಕ್ಕೂ ಇದೇ ಮದ್ದು!; ಚಿನ್ನಕ್ಕಿಂತಲೂ ದುಬಾರಿ ಈ ವಸ್ತು: ಇದಕ್ಕೆಂದೇ ಚೀನಾದವರು ಭಾರತದೊಳಕ್ಕೆ ನುಗ್ಗಿದ್ದಾರೆ ಹಲವು ಸಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts