ಧಾರವಾಡ: ಲಾಕ್ಡೌನ್ ಪ್ರಯುಕ್ತ ಜಿಲ್ಲೆಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಆ ಕಾರಣಕ್ಕೆ ಬೇರೆ ಜಿಲ್ಲೆಯಿಂದ ಮದ್ಯ ತಂದು ಧಾರವಾಡದಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದುದ್ದು ಅಬಕಾರಿ ಇಲಾಖೆಯ ದಾಳಿಯಿಂದ ಬೆಳಕಿಗೆ ಬಂದಿದೆ.
ಧಾರವಾಡ ತಾಲೂಕಿನ ಕಲ್ಲೇ ಗ್ರಾಮದ ಬಳಿ ಹಾಗೂ ಹಾರೋಬೆಳವಡಿ ಗ್ರಾಮದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಈ ಕುರಿತು ಮಾಹಿತಿ ಸಿಕ್ಕ ನಂತರ ಅಲ್ಲಿನ ಅಬಕಾರಿ ಅಧಿಕಾರಿಗಳು ಎರಡು ಸ್ಥಳಗಳಲ್ಲಿ ಪ್ರತ್ಯೇಕ ದಾಳಿ ನಡೆಸಿದ್ದಾರೆ. ಆಟೋ ಚಾಲಕನೊಬ್ಬ ಮದ್ಯವನ್ನು ಕಳ್ಳಸಾಗಣೆ ಮಾಡುತ್ತಿದ್ದದ್ದು ಕಂಡುಬಂದಿದೆ. ಅಧಿಕಾರಿಗಳನ್ನು ಕಂಡೊಡನೆ ಆತ 10 ಲೀಟರ್ ಮದ್ಯವನ್ನು ಆಟೋದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಬಶೀರ ಅಹ್ಮದ ಗರಗ ಪರಾರಿಯಾದ ಚಾಲಕ ಎನ್ನಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಯುವಕನೊಬ್ಬ ಬೈಕ್ ಮೇಲೆ ಮದ್ಯ ತರುತಿದ್ದ. ಆತ ಕೂಡ ಅಧಿಕಾರಿಗಳನ್ನು ಕಂಡೊಡನೆ ಪರಾರಿಯಾಗಿದ್ದಾನೆ. ಆತನ ಬೈಕ್ ಹಾಗೂ ಅದರಲ್ಲಿದ್ದ 10 ಲೀಟರ್ ಮದ್ಯವನ್ನು ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಎರಡೂ ಪ್ರಕರಣಗಳನ್ನು ಪ್ರತ್ಯೇಕವಾಗಿ ದಾಖಲಿಸಿಕೊಳ್ಳಲಾಗಿದೆ.
ಅತ್ತೆಯ ಕುಪ್ಪಸದಿಂದ ಅವಳದ್ದೇ ಕತ್ತು ಹಿಸುಕಿದ ಸೊಸೆ! ಪೊದೆಯಲ್ಲಿ ಅಡಗಿತ್ತು ಮಗ ಸೊಸೆಯ ರಹಸ್ಯ