ಲೆಕ್ಕ ಪರಿಶೋಧಕರ ಪಾತ್ರ ಮಹತ್ವದ್ದು

blank

ತ್ಯಾಗರ್ತಿ: ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್ಥಿಕ ಸ್ಥಿತಿ ಸರಿಯಾಗಿ ಇರಬೇಕಾದರೆ ಲೆಕ್ಕ ಪರಿಶೋಧಕರ ಜವಾಬ್ದಾರಿ ಹೆಚ್ಚು ಎಂದು ಜೋಶಿ ಫೌಂಡೇಷನ್ ಸಂಸ್ಥಾಪಕರಾದ ಲೆಕ್ಕ ಪರಿಶೋಧಕ ಅಬಸೆ ದಿನೇಶ್ ಜೋಶಿ ಹೇಳಿದರು.

ಸಮೀಪದ ಹೆಗ್ಗೋಡು ವಿದ್ಯಾಭಿವೃದ್ಧಿ ಸಂಘದ ಕಾಕಾಲ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಕಾಲ್ ಕ್ಲಾಸಸ್, ಸಿಎ ಫೌಂಡೇಷನ್ ಹಾಗೂ ಕೌಶಲ ಅಭಿವೃದ್ಧಿ ಕೋರ್ಸ್ ಉದ್ಘಾಟಿಸಿ ಮಾತನಾಡಿ, ಲೆಕ್ಕ ಪರಿಶೋಧಕರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರು ಕೂಡಿಟ್ಟ ಹಣ ಅಪವ್ಯಯ ಆಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ವಾಣಿಜ್ಯ ವಿಭಾಗದಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಉದ್ಯೋಗ ಕಂಡುಕೊಳ್ಳಲು ಅನೇಕ ಅವಕಾಶಗಳಿವೆ. ಕೌಶಲವನ್ನು ವೃದ್ಧಿಸಿಕೊಳ್ಳಲು ಪರಿಶ್ರಮದಿಂದ ಅಭ್ಯಾಸ ಮಾಡಬೇಕು. ಪ್ರಾಮಾಣಿಕತೆ ರೂಢಿಸಿಕೊಳ್ಳಬೇಕು. ಇದರಿಂದ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಬಹುದು ಎಂದರು.
ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ ರೋಟರಿ ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರದ ಅಧ್ಯಕ್ಷ ಡಾ. ಎಚ್.ಎಂ.ಶಿವಕುಮಾರ್ ಮಾತನಾಡಿ,ಪ್ರಸ್ತುತ ತಾಲೂಕಿನಲ್ಲಿ ಡೆಂಘೆ ಜ್ವರ ಹರಡುತ್ತಿರುವ ಕಾರಣಕ್ಕೆ ರಕ್ತಕ್ಕೆ ಬೇಡಿಕೆ ಹೆಚ್ಚುತ್ತಿದೆ. ಯುವಜನತೆ ರಕ್ತದಾನಕ್ಕೆ ಮುಂದಾಗಬೇಕು ಎಂದು ಹೇಳಿದರು.
30ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹಿಸಲಾಯಿತು. ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಕೇಶವ ಸಂಪೆಕೈ, ಪ್ರಮುಖರಾದ ಬಾಗಿ ಸತ್ಯನಾರಾಯಣ, ನಾಗರಾಜ್ ಸಭಾಹಿತ್, ವ.ಶಂ.ರಾಮಚಂದ್ರ, ಪ್ರಭಾಕರ, ವೆಂಕಟೇಶ್ ಕೆರೆಕೈ, ಪ್ರಾಚಾರ್ಯ ಎ.ಎಸ್‌ಗಣಪತಿ, ರಕ್ತನಿಧಿ ಕೇಂದ್ರದ ಡಾ. ಉಲ್ಲಾಸ್ ಇದ್ದರು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…