More

    ಬಿರಿಯಾನಿ ತಿನ್ನಲು ಹೋಗಿ 2 ಲಕ್ಷ ರೂಪಾಯಿ ಕಳೆದುಕೊಂಡ ಆಟೋ ಚಾಲಕ!

    ಬೆಂಗಳೂರು: ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಈ ಆಟೋಚಾಲಕನಿಗೆ ಬಿರಿಯಾನಿ ತಿನ್ನುವ ಆಸೆಯೇ ದುಃಖಕ್ಕೆ ಮೂಲವಾಗಿ ಪರಿಣಮಿಸಿದೆ. ಬಿರಿಯಾನಿ ತಿನ್ನಲೆಂದು ಹೋದ ಈ ಆಟೋಚಾಲಕ 2 ಲಕ್ಷ ರೂಪಾಯಿ ಕಳೆದುಕೊಳ್ಳುವಂತಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಇಂಥದ್ದೊಂದು ಘಟನೆ ಸಂಭವಿಸಿದೆ.

    ಹನುಮಂತರಾಯ ಎಂಬ ಎಂಬ ಆಟೋಚಾಲಕ ಹಣ ಕಳೆದುಕೊಂಡವ. ಸಾಲದ ಹೊರೆ ಎದುರಿಸುತ್ತಿದ್ದ ಈತ ಆ ಭಾರ ಇಳಿಸಿಕೊಳ್ಳಲು ಚಿನ್ನವನ್ನು ಅಡವಿಟ್ಟಿದ್ದ. ಬ್ಯಾಂಕ್​ವೊಂದರಲ್ಲಿ ಚಿನ್ನ ಅಡವಿಟ್ಟು 2 ಲಕ್ಷ ರೂಪಾಯಿ ಸಾಲ ಪಡೆದಿದ್ದ ಈ ಚಾಲಕ, ಆ ಹಣ ಹಿಡಿದುಕೊಂಡು ಬರುತ್ತಿದ್ದಾಗ ಬಿರಿಯಾನಿ ತಿನ್ನಲು ಹೋಗಿದ್ದ.

    ಇದನ್ನೂ ಓದಿ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಮಗುಚಿ ಬಿದ್ದು ಸೈಕಲ್ ಸವಾರ ಸ್ಥಳದಲ್ಲೇ ಸಾವು

    ಹಣ ಬೈಕ್​ನಲ್ಲಿನ ಸೈಡ್​ ಲಾಕರ್​ನಲ್ಲಿಟ್ಟುಕೊಂಡು ಬಾಮೈದನ ಜೊತೆಗೆ ಮರಳುತ್ತಿದ್ದ ಹನುಮಂತರಾಯ, ಮಾರ್ಗಮಧ್ಯೆ ಬಿರಿಯಾನಿ ತಿನ್ನಲು ದ್ವಿಚಕ್ರವಾಹನ ನಿಲ್ಲಿಸಿದ್ದಾನೆ. ಈತನ ಬೈಕ್​ ಬಳಿ ಸುಳಿದಾಡುತ್ತಿದ್ದ ಕಳ್ಳರು ಆ ಹಣವನ್ನು ಎಗರಿಸಿ ಇನ್ನೊಂದು ಬೈಕ್​ನಲ್ಲಿ ಪರಾರಿ ಆಗಿರುವುದು ಸಿಸಿಟಿವಿ ಕ್ಯಾಮರಾವೊಂದರಲ್ಲಿ ಸೆರೆಯಾಗಿದೆ. ಇತ್ತೀಚೆಗೆ ನಡೆದ ಈ ಕಳ್ಳತನ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳ ಪತ್ತೆಗಾಗಿ ಬ್ಯಾಡರಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

    ಮನೆಯಲ್ಲೇ ವ್ಯಾಪಾರ ಮಾಡುವ ಮಹಿಳೆಯರೇ ಎಚ್ಚರ ಎಚ್ಚರ; ರಾಣಿಪೇಟೆಯಲ್ಲಿ ಭೀಕರ ಕೊಲೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts