ಕೇಪ್ಟೌನ್: ಅತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದಗ್ಯ ಗೆದ್ದು ಸರಣಿ ಸಮಬಲ ಸಾಧಿಸಬೇಕೆಂಬ ಹಂಬಲದಲ್ಲಿ ಟೀಂ ಇಂಡಿಯಾ ಕಠಿಣ ಅಭ್ಯಾಸ್ ನಡೆಸುತ್ತಿದ್ದು, ಇದರ ಮಧ್ಯೆಯೇ ಕೆಟ್ಟ ಸುದ್ದಿಯೊಂದು ಕೇಳಿ ಬಂದಿದ್ದು, ಪ್ರಮುಖ ಆಟಗಾರ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಜನವರಿ 3 ರಿಂದ ಶುರುವಾಗಲಿದೆ. ಈ ಪಂದ್ಯ ಕೇಪ್ ಟೌನ್ನ ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಎರಡು ಪಂದ್ಯಗಳ ಟೆಸ್ಟ್ಗಳ ಸರಣಿಯಲ್ಲಿ ರೋಹಿತ್ ಶರ್ಮಾ ಪಡೆ 0-1 ಹಿನ್ನಡೆ ಅನುಭವಿಸಿದೆ. ಮೊದಲ ಟೆಸ್ಟ್ ಪಂದ್ಯದ ಸೋಲಿನ ಸೇಡು ತೀರಿಸಿಕೊಂಡು ಟೀಮ್ ಇಂಡಿಯಾ ಹೊಸ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸಲು ಸಜ್ಜಾಗಿದೆ.
ಭಾರತ ತಂಡದ ವೇಗದ ಬೌಲರ್ ಶಾರ್ದೂಲ್ ಠಾಕೂರ್ ಶನಿವಾರ ನೆಟ್ಸ್ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದ ವೇಳೆ ಭುಜಕ್ಕೆ ಚೆಂಡೇಟು ತಿಂದು ಗಾಯಗೊಂಡಿದ್ದರು. ದರಿಂದಾಗಿ ಅವರು ದ. ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ, ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಬದಲಿಗೆ ಆವೇಶ್ ಖಾನ್ ತಂಡದಲ್ಲಿ ಸ್ಥಾನ ಪಡೆಯಬಹುದು ಎಂದು ಹೇಳಲಾಗಿದೆ.