More

    ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ; ಕಾರಣ ಕೇಳಿದ ಸಭಾಪತಿಗೆ ಅವರು ಹೇಳಿದ್ದಿಷ್ಟು..

    ಹುಬ್ಬಳ್ಳಿ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಜೆಡಿಎಸ್​ ಟಿಕೆಟ್ ಖಚಿತವಾಗುತ್ತಿದ್ದಂತೆ ಆಯನೂರು ಮಂಜುನಾಥ್ ಇಂದು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ಇಂದು ಪ್ರಕಟಿಸಿದ್ದ ಮೂರನೇ ಪಟ್ಟಿಯಲ್ಲಿ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಹೆಸರು ಘೋಷಣೆಯಾಗಿತ್ತು.

    ಇದನ್ನೂ ಓದಿ: ಜೆಡಿಎಸ್​ ಪಟ್ಟಿಯಲ್ಲಿ ಮಹತ್ವದ ಬದಲಾವಣೆ; 12 ಕ್ಷೇತ್ರಗಳಲ್ಲಿ ಹೊಸದಾಗಿ ಅಭ್ಯರ್ಥಿಗಳ ಘೋಷಣೆ!

    ಹುಬ್ಬಳ್ಳಿಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಗೆ ಆಯನೂರು ಮಂಜುನಾಥ್ ತಮ್ಮ ಆಪ್ತರೊಂದಿಗೆ ಆಗಮಿಸಿದ್ದು, ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಸ್ವೀಕರಿಸುವ ಮುನ್ನ ಅವರಿಂದ ಸಭಾಪತಿ ಕಾರಣವನ್ನೂ ಕೇಳಿದರು.

    ಇದನ್ನೂ ಓದಿ: ಶೆಟ್ಟರ್ ಜತೆ ಗುರುತಿಸಿಕೊಳ್ಳದಂತೆ ಪಕ್ಷದವರಿಗೆ ಬಿಜೆಪಿ ಹೈಕಮಾಂಡ್ ಸೂಚನೆ; ಜನ ಸೇರಿಸಲು ಪರದಾಟ?

    ಯಾರ ಒತ್ತಡಕ್ಕಾಗಿ ಮಣಿದು ರಾಜೀನಾಮೆ ನೀಡುತ್ತಿದ್ದೀರಾ ಎಂದು ಎಂದು ಮಂಜುನಾಥ್​ಗೆ ಸಭಾಪತಿ ಪ್ರಶ್ನೆ ಮಾಡಿದ್ದಾರೆ. ನಾನು ಯಾರ ಒತ್ತಡಕ್ಕೂ ಮಣಿದು ರಾಜಿನಾಮೆ ನೀಡುತ್ತಿಲ್ಲ. ನನ್ನ ಸ್ವ-ಇಚ್ಛೆಯಿಂದ ರಾಜಿನಾಮೆ ನೀಡುತ್ತಿದ್ದೇನೆ ಎಂದು ಮಂಜುನಾಥ್ ತಿಳಿಸಿದ್ದಾರೆ. ಆಯನೂರು ಮಂಜುನಾಥ್ ನೈಋತ್ಯ ಪದವೀದರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆ ಆಗಿದ್ದರು.

    ಇದನ್ನೂ ಓದಿ: ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ

    ಈ ಚುನಾವಣಾ ಘೋಷಣೆಯಾದ ಮೇಲೆ 6 ಜನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾನು ಪಕ್ಷಾಂತರ ಪರ್ವ ನೋಡಿದ್ದೆ, ಆದರೆ ರಾಜೀನಾಮೆ ಪರ್ವ ನೋಡಿರಲಿಲ್ಲ. ಕಳೆದ 42 ವರ್ಷಗಳಲ್ಲಿ ಇಷ್ಟು ಪ್ರಮಾಣದಲ್ಲಿ ರಾಜೀನಾಮೆ ನೀಡಿದ್ದು ಇದೇ ಮೊದಲು. ಯಾರೇ ರಾಜಿನಾಮೆ ನೀಡಲು ಬಂದರೆ ಮತ್ತೊಂದು ಸಲ ಯೋಚನೆ ಮಾಡಿ ಎಂದು ನಾನು ತಿಳಿ ಹೇಳುತ್ತೇನೆ. ಅದಾಗ್ಯೂ ಅವರ ನಿರ್ಧಾರ ದೃಢವಾಗಿದ್ದಾಗ ನಾನು ಅನಿವಾರ್ಯವಾಗಿ ರಾಜೀನಾಮೆ ಸ್ವೀಕರಿಸಬೇಕಾಗುತ್ತದೆ ಎಂದು ಆಯನೂರು ಮಂಜುನಾಥ್ ರಾಜೀನಾಮೆ ಸ್ವೀಕರಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಭಾಪತಿ ಹೊರಟ್ಟಿ ಹೇಳಿದ್ದಾರೆ.

    ಜೆಡಿಎಸ್​ ಮೂರನೇ ಪಟ್ಟಿ ಬಿಡುಗಡೆ: ಯಾರ್ಯಾರಿಗೆ ಟಿಕೆಟ್? ಇಲ್ಲಿದೆ ಪೂರ್ತಿ ವಿವರ..

    ದಾಖಲೆ ಇಲ್ಲದ 7 ಕೋಟಿ ರೂ. ಪತ್ತೆ; ಐಎಎಸ್​ ಅಧಿಕಾರಿಯೊಬ್ಬರು ಸ್ಥಳಕ್ಕೆ ಹೋದ ಬಳಿಕ ಹಣವೇ ನಾಪತ್ತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts