More

    ರಾಮ ಮಂದಿರ ಗರ್ಭಗುಡಿ ಬಹುತೇಕ ಪೂರ್ಣ: ಡಿ. 15ರಂದು ಮೂರ್ತಿಯ ಆಯ್ಕೆ

    ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಕಾಮಗಾರಿ ಭರದಿಂದ ಸಾಗುತ್ತಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ರಾಮ ಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪಿಸುವ ಬಹುತೇಕ ಪೂರ್ಣಗೊಂಡಿರುವ ಗರ್ಭಗುಡಿಯ ಚಿತ್ರಗಳನ್ನು ಶನಿವಾರ ಹಂಚಿಕೊಂಡಿದ್ದಾರೆ.

    “ಶ್ರೀರಾಮ ಲಲ್ಲಾನ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ಇತ್ತೀಚೆಗೆ, ದೀಪಾಲಂಕಾರದ ಕೆಲಸವೂ ಪೂರ್ಣಗೊಂಡಿದೆ. ಕೆಲವು ಛಾಯಾಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ” ಎಂದು ಮಂದಿರ ನಿರ್ಮಾಣದ ಉಸ್ತುವಾರಿ ವಹಿಸಿಕೊಂಡಿರುವ ಚಂಪತ್ ರೈ ಎಕ್ಸ್​ನಲ್ಲಿ ಬರೆದಿದ್ದಾರೆ.

    ಮುಂದಿನ ವರ್ಷ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಶಂಕುಸ್ಥಾಪನೆಗೆ ಸಿದ್ಧವಾಗಲಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಂದಾಜು 6,000 ಜನರಿಗೆ ಅಯೋಧ್ಯೆಯಲ್ಲಿ ‘ಪ್ರಾಣ ಪ್ರತಿಷ್ಠಾ’ (ಪ್ರತಿಷ್ಠಾಪನೆ ಸಮಾರಂಭ) ಗೆ ಪತ್ರಗಳನ್ನು ಕಳುಹಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಪ್ರಮುಖ ವ್ಯಕ್ತಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

    ಏತನ್ಮಧ್ಯೆ, ಮೂರು ರಾಮಲಲ್ಲಾ ವಿಗ್ರಹಗಳಲ್ಲಿ ಯಾವುದನ್ನು ಗರ್ಭಗುಡಿಯಲ್ಲಿ ಸ್ಥಾಪಿಸಲಾಗುವುದು ಎಂಬುದರ ಕುರಿತು ರಾಮಮಂದಿರ ಟ್ರಸ್ಟ್ ಡಿಸೆಂಬರ್ 15 ರಂದು ಅಂತಿಮ ನಿರ್ಧಾರ ಕೈಗೊಳ್ಳಲಿದೆ.

    “ಕರ್ನಾಟಕ ಮತ್ತು ರಾಜಸ್ಥಾನದಿಂದ ತರಿಸಲಾದ ಎರಡು ಬಂಡೆಗಳಿಂದ ಮೂರು ವಿಗ್ರಹಗಳನ್ನು ಕೆತ್ತಲಾಗುತ್ತಿದೆ. ಶೇಕಡಾ 90 ರಷ್ಟು ವಿಗ್ರಹಗಳು ಸಿದ್ಧವಾಗಿದ್ದು, ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಈ ಮೂರು ವಿಗ್ರಹಗಳಲ್ಲಿ ಡಿ.15 ರಂದು ಉತ್ತಮವಾದ ಮೂರ್ತಿಯನ್ನು ಆಯ್ಕೆ ಮಾಡಿ ದೇವಾಲಯದ ಗರ್ಭಗುಡಿಯಲ್ಲಿ ಆ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು” ಎಂದು ಚಂಪತ್ ರೈ ಹೇಳಿದ್ದಾರೆ.

    ಗಣೇಶ್ ಭಟ್, ಅರುಣ್ ಯೋಗಿರಾಜ್ ಮತ್ತು ಸತ್ಯನಾರಾಯಣ ಪಾಂಡೆ ಅವರು ವಿಗ್ರಹಗಳನ್ನು ಕೆತ್ತುತ್ತಿದ್ದಾರೆ.

    “ಜನವರಿ 2024 ರ ಮೂರನೇ ವಾರದಲ್ಲಿ, ಪ್ರಧಾನಿ ಮೋದಿಯವರ ಕೈಯಲ್ಲಿ ರಾಮ ಲಲ್ಲಾನ ವಿಗ್ರಹವನ್ನು ಅದರ ಮೂಲ ಸ್ಥಳದಲ್ಲಿ ಸ್ಥಾಪಿಸಲಾಗುವುದು” ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ ಈ ಹಿಂದೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

    ಭಾರತ ಬಡ ದೇಶ ಎಂಬುದನ್ನು ಮರೆಯಬಾರದು: ವಾರಕ್ಕೆ 70 ಗಂಟೆಗಳ ಕೆಲಸ ಸಮರ್ಥಿಸಿಕೊಂಡ ನಾರಾಯಣ ಮೂರ್ತಿ

    ಕಾರ್ಗಿಲ್ ಯುದ್ಧ ವಿರೋಧಿಸಿದ್ದಕ್ಕಾಗಿ ಪದಚ್ಯುತಿ: ಜನರಲ್​ ಮುಷರಫ್​ ದುಷ್ಕೃತ್ಯ ಬಿಚ್ಚಿಟ್ಟ ನವಾಜ್ ಷರೀಫ್

    ‘RIP ಅಜ್ಮಲ್ ಷರೀಫ್ 1995-2003’: ತನ್ನದೇ ಶ್ರದ್ಧಾಂಜಲಿ ಪೋಸ್ಟ್​ ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts