ಅಯೋಧ್ಯೆಯ ಬ್ರಹ್ಮರಥ ನಿರ್ಮಾಣಕ್ಕೆ ಇಂದು ಕುಂದಾಪುರದ ಕುಂಭಾಶಿಯಲ್ಲಿ ಚಾಲನೆ: ಶ್ರೀರಾಮನಿಗಾಗಿ ವಿಶ್ವದ ಅತಿ ಎತ್ತರದ ರಥ

ಉಡುಪಿ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕಾಗಿ ನಿರ್ಮಾಣ ಆಗಲಿರುವ ಬೃಹತ್ ಬ್ರಹ್ಮರಥಕ್ಕೆ ಇಂದು ಕುಂದಾಪುರದ ಕುಂಭಾಶಿಯಲ್ಲಿ ಚಾಲನೆ ನೀಡಲಾಗಿದೆ. ಪೂರ್ವನಿಗದಿತವಾಗಿರುವಂತೆ ಅಕ್ಷಯ ತದಿಗೆಯ ಈ ಶುಭದಿನದಂದು ರಥ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ. ಹಿರಿಯ ರಥಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ರಾಜಗೋಪಾಲಾಚಾರ್ಯ ಅವರಿಂದ ರಥ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಶ್ರೀರಾಮನಿಗಾಗಿ ಜಗತ್ತಿನಲ್ಲೇ ಅತಿ ಎತ್ತರದ ಭವ್ಯ ಬ್ರಹ್ಮರಥ ಇದಾಗಿರಲಿದ್ದು, ಎರಡೂವರೆ ವರ್ಷದ ಅವಧಿಯಲ್ಲಿ ಇದನ್ನು ಪೂರ್ಣಗೊಳಿಸುವ ಗುರಿ ಇರಿಸಿಕೊಳ್ಳಲಾಗಿದೆ. ಕಿಷ್ಕಿಂಧೆಯ ಹನುಮ ಜನ್ಮಭೂಮಿ ತೀರ್ಥಕ್ಷೇತ್ರದ ವತಿಯಿಂದ ಈ ರಥವು ಅಯೋಧ್ಯೆಯ … Continue reading ಅಯೋಧ್ಯೆಯ ಬ್ರಹ್ಮರಥ ನಿರ್ಮಾಣಕ್ಕೆ ಇಂದು ಕುಂದಾಪುರದ ಕುಂಭಾಶಿಯಲ್ಲಿ ಚಾಲನೆ: ಶ್ರೀರಾಮನಿಗಾಗಿ ವಿಶ್ವದ ಅತಿ ಎತ್ತರದ ರಥ