More

    ಧರ್ಮಸ್ಥಳ ಸಂಸ್ಥೆ ಕಚೇರಿಯಲ್ಲಿ ಆಯುಧ ಪೂಜೆ

    ಬೆಟ್ಟದಪುರ: ಬೆಟ್ಟದಪುರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಚೇರಿಯಲ್ಲಿ ನವರಾತ್ರಿ ಅಂಗವಾಗಿ ಆಯುಧ ಪೂಜಾ ಕಾರ್ಯಕ್ರಮ ಶುಕ್ರವಾರ ನಡೆಯಿತು.

    ಹಬ್ಬದ ಪ್ರಯುಕ್ತ ಕಚೇರಿಯನ್ನು ತಳಿರು, ತೋರಣ ಹಾಗೂ ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಪುರೋಹಿತರಾದ ಹರಳಹಳ್ಳಿ ಗುರುಮಠದ ಶ್ರೀಕಂಠಾರಾಧ್ಯ ಶಾಸ್ತ್ರಿಗಳ ನೃತೃತ್ವದಲ್ಲಿ ನಾನಾ ಪೂಜಾವಿಧಿವಿಧಾನ ಜರುಗಿದವು. ನಂತರ ಲಕ್ಷ್ಮೀ ಪೂಜೆ ನೆರವೇರಿಸಿ ಪ್ರಸಾದ ವಿತರಿಸಲಾಯಿತು.
    ಸಂಸ್ಥೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಪೂಜಾ ಕಾರ್ಯಕ್ರಮದ ಬಳಿಕ ಮಾತನಾಡಿ, ನವರಾತ್ರಿ ಸಂದರ್ಭ ಶಕ್ತಿ ದೇವತೆಗಳ ಆರಾಧನೆ ಮಾಡಿ ಒಂಬತ್ತು ದಿನಗಳ ಕಾಲ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಶ್ರೀ ಕ್ಷೇತ್ರದ ಮಂಜುನಾಥ ಸ್ವಾಮಿ ಹಾಗೂ ದೇವತೆಗಳ ಅನುಗ್ರಹದಿಂದ ಉತ್ತಮ ಮಳೆ ಬೆಳೆಯಾಗಿ ಕನ್ನಡ ನಾಡು ಸಂಪತ್ಭರಿತವಾಗಿರಲಿ ಎಂದು ಆಶಿಸಿದರು.

    ಸಂಸ್ಥೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ಜೈನ್ ಮಾತನಾಡಿ, ಎಲ್ಲರೂ ಒಟ್ಟಾಗಿ ಒಂದೆಡೆ ಸೇರಿ ಹಬ್ಬ ಆಚರಿಸುವುದರಿಂದ ನಮ್ಮಲ್ಲಿ ಭಾವೈಕ್ಯತೆ ಮೂಡಿ ಧಾರ್ಮಿಕ ಸಂಪ್ರದಾಯಗಳ ಬಗ್ಗೆ ಜಾಗೃತಿ ಮೂಡುತ್ತದೆ ಎಂದರು.

    ಜನಜಾಗೃತಿ ವೇದಿಕೆಯ ಬಿ.ಜೆ.ದೇವರಾಜು, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬೆಕ್ಕರೆ ಸತೀಶ್ ಆರಾಧ್ಯ, ಮುಖಂಡರಾ ಜ್ಞಾನೇಶ್ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts