More

    ಉರುಳಿದ ಅಂಬೇಡ್ಕರ್ ಭಾವಚಿತ್ರ

    ಶ್ರೀನಿವಾಸಪುರ: ಪಟ್ಟಣದ ಅಮಾನಿಕೆರೆ ಅಂಗಳದಲ್ಲಿ ಅಂಬೇಡ್ಕರ್ ಭವನಕ್ಕಾಗಿ ಮೀಸಲಿಟ್ಟಿದ್ದ 2 ಎಕರೆ ಜಾಗದಲ್ಲಿ ನಿಲ್ಲಿಸಲಾಗಿದ್ದ ಅಂಬೇಡ್ಕರ್ ಭಾವಚಿತ್ರವನ್ನು ಉರುಳಿಸಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಮತ್ತು ಕಾಂಪೌಂಡ್ ಕಾಮಗಾರಿ ಪ್ರಾರಂಭಿಸಬೇಕು ಎಂದು ವಿವಿಧ ದಲಿತ ಸಂಘರ್ಷ ಸಮಿತಿ ಮುಖಂಡರು ಬುಧವಾರ ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು.

    ದಲಿತ ಮುಖಂಡರಾದ ಸಿ. ನಾರಾಯಣಸ್ವಾಮಿ ಮತ್ತು ಟಿ.ನಾರಾಯಣಸ್ವಾಮಿ ಮಾತನಾಡಿ, ಉದ್ದೇಶಪೂರ್ವಕವಾಗಿ ಅಂಬೇಡ್ಕರ್ ಭಾವಚಿತ್ರವನ್ನು ನೆಲಸಮ ಮಾಡಲಾಗಿದೆ. ಇಲ್ಲಿ ಕಾಂಪೌಂಡ್ ನಿರ್ಮಾಣ ಮಾಡಬೇಕು, ಈ ಜಾಗದಲ್ಲಿ ಅಕ್ರಮವಾಗಿ ನೆಲೆಸಿರುವವರನ್ನು ತೆರವುಗೊಳಿಸಬೇಕು. ಅಲ್ಲಿಯವರೆಗೆ ನಾವು ಧರಣಿ ಮುಂದುವರಿಸುತ್ತೇವೆ ಎಂದು ಪಟ್ಟು ಹಿಡಿದರು.

    ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪ್ರಭಾರಿ ಸಮಾಜ ಕಲ್ಯಾಣ ಅಧಿಕಾರಿ ಶಿವಕುಮಾರ್, ಈ ಕುರಿತು ಠಾಣೆಯಲ್ಲಿ ದೂರು ನೀಡಿದರೆ ನೆಲಸಮಗೊಳಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

    ಮುಖಂಡರಾದ ಪೆದ್ದಪಲ್ಲಿ ನಾರಾಯಣಸ್ವಾಮಿ, ಕೂಸ್ಸಂದ್ರ ರೆಡ್ಡಪ್ಪ, ಬಂಗವಾದಿ ನಾಗರಾಜ್, ಗೌನಿಪಲ್ಲಿ ನರಸಿಂಹ, ತಾಪಂ ಸದಸ್ಯ ಆರ್.ಜಿ.ನರಸಿಂಹಯ್ಯ, ರಾಯಲ್ಪಾಡು ವಾಸು, ಚಲ್ದಿಗಾನಹಳ್ಳಿ ವೆಂಕಟೇಶ್, ಹೊದಲಿ ನಾರಾಯಣಸ್ವಾಮಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts