More

    ನಾಳೆ ದೆಹಲಿಗೆ ತೆರಳಲಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ…: ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಿಗಲಿದೆಯಾ ಗುಡ್​ ನ್ಯೂಸ್​?

    ಶಿವಮೊಗ್ಗ: ಸದ್ಯ ರಾಜ್ಯಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಗ್ಗಂಟಾಗಿದೆ. ಸಂಪುಟ ವಿಸ್ತರಣೆಗಾಗಿ ಪಕ್ಷದೊಳಗೆ ಹಲವರು ಕಾಯುತ್ತಿದ್ದಾರೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಮಾತನಾಡಿ, ಹೈಕಮಾಂಡ್​ ಜತೆ ಚರ್ಚಿಸಲು ನಾಳೆ ( ಜ.30) ಬೆಳಗ್ಗೆ ದೆಹಲಿಗೆ ತೆರಳುವುದಾಗಿ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ಮತ್ತು ರಮೇಶ್​ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆದಿಲ್ಲವೆಂದು ಹೇಳಿದ್ದಾರೆ.

    ನಾಳೆ ದೆಹಲಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್​ ಷಾ ಅವರೊಂದಿಗೆ ರಾಜ್ಯದ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

    ಮಾರ್ಚ್​ 5 ರಂದು ಬಜೆಟ್​ ಮಂಡನೆ ಮಾಡುವ ಕುರಿತಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ಈ ಬಾರಿಯ ಬಜೆಟ್​ನಲ್ಲಿ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಪ್ರತ್ಯೇಕ ಕೃಷಿ ಬಜೆಟ್​ ಮಾಡಬೇಕು ಎನ್ನುವ ಕೂಗು ಪ್ರತಿ ವರ್ಷದಂತೆ ಈ ವರ್ಷವೂ ಕೇಳಿಬರುತ್ತಿದೆಯಾದರೂ ಅದರ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದಿದ್ದಾರೆ.

    ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಎಸ್​ಡಿಪಿಐ ಮತ್ತು ಪಿಎಫ್​ಐ ನಿಷೇಧ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಬಿಎಸ್​ವೈ ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts