More

    ಅಪಘಾತದಲ್ಲಿ ಗಾಯಗೊಂಡು ರಸ್ತೆ ಮೇಲೆ ನರಳುತ್ತಿದ್ದ ಯುವಕರನ್ನು ತಮ್ಮ ವಾಹನದಲ್ಲೇ ಕರೆದೊಯ್ದು ಮಾನವೀಯತೆ ಮೆರೆದ ಬಿ.ವೈ.ವಿಜಯೇಂದ್ರ…

    ಬೆಂಗಳೂರು: ಅಪಘಾತಕ್ಕೀಡಾಗಿ ರಸ್ತೆಯಲ್ಲಿಯೇ ನರಳುತ್ತಿದ್ದ ಯುವಕರನ್ನು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸುವ ಮೂಲಕ ಬಿಜೆಪಿ ನಾಯಕ ವಿಜಯೇಂದ್ರ ಅವರು ಮಾನವೀಯತೆ ಮೆರೆದಿದ್ದಾರೆ.

    ಬನ್ನೂರು-ಮೈಸೂರು ರಸ್ತೆಯಲ್ಲಿ ಓಮಿನಿ ಹಾಗೂ ಬೈಕ್​ ನಡುವೆ ಅಪಘಾತ ಸಂಭವಿಸಿತ್ತು. ಬೈಕ್​ ಸವಾರರು ಗಾಯಗೊಂಡು ರಸ್ತೆ ಮೇಲೆ ನರಳಾಡುತ್ತಿದ್ದರು. ಆದರೆ ಆ್ಯಂಬುಲೆನ್ಸ್​ ಬಂದಿರಲಿಲ್ಲ.

    ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿ.ವೈ.ವಿಜಯೇಂದ್ರ ಅವರು ಗಾಯಾಳುಗಳನ್ನು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಕಾವೇರಿ ಆಸ್ಪತ್ರೆಗೆ ಸೇರಿಸಲಾಗಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts