ಬೆಂಗಳೂರು: ಅಪಘಾತಕ್ಕೀಡಾಗಿ ರಸ್ತೆಯಲ್ಲಿಯೇ ನರಳುತ್ತಿದ್ದ ಯುವಕರನ್ನು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸುವ ಮೂಲಕ ಬಿಜೆಪಿ ನಾಯಕ ವಿಜಯೇಂದ್ರ ಅವರು ಮಾನವೀಯತೆ ಮೆರೆದಿದ್ದಾರೆ.
ಬನ್ನೂರು-ಮೈಸೂರು ರಸ್ತೆಯಲ್ಲಿ ಓಮಿನಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ಸವಾರರು ಗಾಯಗೊಂಡು ರಸ್ತೆ ಮೇಲೆ ನರಳಾಡುತ್ತಿದ್ದರು. ಆದರೆ ಆ್ಯಂಬುಲೆನ್ಸ್ ಬಂದಿರಲಿಲ್ಲ.
ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿ.ವೈ.ವಿಜಯೇಂದ್ರ ಅವರು ಗಾಯಾಳುಗಳನ್ನು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಕಾವೇರಿ ಆಸ್ಪತ್ರೆಗೆ ಸೇರಿಸಲಾಗಿದೆ. (ದಿಗ್ವಿಜಯ ನ್ಯೂಸ್)