More

    ವಿಜಯೇಂದ್ರ ಉಸ್ತುವಾರಿಗೆ ಹೆಚ್ಚಿದ ಬೇಡಿಕೆ

    ಬೆಂಗಳೂರು: ಬೈಎಲೆಕ್ಷನ್​ಗಳ ಯಶಸ್ಸಿನ ಹಿಂದೆ ಬಿವೈ ವಿಜಯೇಂದ್ರ ಮಾಸ್ಟರ್ ಮೈಂಡ್ ಇರುವುದರಿಂದ ವಿಜಯೇಂದ್ರ ಉಸ್ತುವಾರಿಗೆ ಬೇಡಿಕೆ ಹೆಚ್ಚಾಗಿದೆ.

    ಮಸ್ಕಿ ಉಪಚುನಾವಣೆಗೂ ವಿಜಯೇಂದ್ರ ಅವರಿಗೆ ಉಸ್ತುವಾರಿ ಕೊಡಿ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಬೇಡಿಕೆ ಸಲ್ಲಿಸಿದ್ದಾರೆ.

    ಇದನ್ನೂ ಓದಿ: LIVE: ಯಾರ ಮುಡಿಗೆ ಶಿರಾ, ಆರ್.ಆರ್.ನಗರ? ಎರಡೂ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ

    ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಹೆಚ್ಚು ಲಿಂಗಾಯತರು ಇದ್ದಾರೆ. ಹಾಗಾಗಿ ವಿಜಯೇಂದ್ರ ಅವರಿಗೆ ಉಸ್ತುವಾರಿ ನೀಡಿದರೆ ಉತ್ತಮ ಎಂದು ಸಿಎಂ ಬಳಿ ಕೇಳಿಕೊಂಡಿದ್ದೇವೆ ಎಂದಿದ್ದಾರೆ.

    ಸದ್ಯ ಆರ್​ಆರ್​ ನಗರ ಹಾಗೂ ತುಮಕೂರಿನ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು ಗೆಲುವಿನತ್ತ ದಾಪುಗಾಲು ಇಡುತ್ತಿದೆ. ಶಿರಾದಲ್ಲಿ ಕಮಲ ಅರಳಿದ್ದಲ್ಲಿ ಅದರ ಹಿಂದಿನ ಶ್ರಮ ವಿಜಯೇಂದ್ರರಿಗೆ ಸಲ್ಲುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೆ, ಮಂಡ್ಯದ ಕೆ.ಆರ್​. ಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಲು ವಿಜಯೇಂದ್ರ ಕಾರಣರಾಗಿದ್ದರು. ಹೀಗಾಗಿ ಅವರಿಗೆ ಬೇಡಿಕೆ ಹೆಚ್ಚಿದೆ. (ದಿಗ್ವಿಜಯ ನ್ಯೂಸ್​)

    ಕುಸುಮಾಗೆ ಶುರುವಾಯ್ತಾ ಸೋಲಿನ ಭಯ?: ನಿನ್ನೆ ಹೇಳಿದ ಮಾತಿನಂತೆ ನಡೆಯದ ಕಾಂಗ್ರೆಸ್​ ಅಭ್ಯರ್ಥಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts