More

    ಎಂಎಲ್​ಸಿ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ; ಮುಂದಿನ ನಡೆ?

    ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವಾಗ ರಾಜಕೀಯ ವಲಯದ ಗಮನ ಸೆಳೆಯುವಂಥ ಪ್ರಕರಣವೊಂದು ನಡೆದಿದ್ದು, ಸಾಕಷ್ಟು ಕುತೂಹಲಕ್ಕೂ ಕಾರಣವಾಗಿದೆ. ಮಾತ್ರವಲ್ಲ, ನಾಯಕರೊಬ್ಬರ ಪಕ್ಷಾಂತರದ ಸುಳಿವನ್ನು ಕೂಡ ನೀಡಿದೆ.

    ಅದೇನೆಂದರೆ, ವಿಧಾನಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಅವರು ಇಂದು ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

    ಇದನ್ನೂ ಓದಿ: ವಿಮಾನದಲ್ಲೇ ಹೃದಯಾಘಾತ; ಆಕಾಶದಲ್ಲೇ ಹಾರಿಹೋದ ಪ್ರಾಣಪಕ್ಷಿ

    ಮಾಜಿ ಶಾಸಕರಾಗಿರುವ, ಬಿಜೆಪಿಯ ನಾಯಕರೂ ಆಗಿರುವ ಬಾಬುರಾವ್ ಚಿಂಚನಸೂರ್ ಅವರು ರಾಜೀನಾಮೆ ನೀಡಲಿರುವ ಕುರಿತು ಕೆಲವು ದಿನಗಳಿಂದ ಮಾಹಿತಿ ಹರಿದಾಡುತ್ತಿದ್ದು, ಇಂದು ಅದಕ್ಕೆ ತೆರೆ ಬಿದ್ದಿದೆ. ಮಾತ್ರವಲ್ಲ, ಅವರ ಮುಂದಿನ ನಡೆ ಕುರಿತು ಕುತೂಹಲ ಕೂಡ ಮೂಡಿದೆ. ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು ಸದ್ಯದಲ್ಲೇ ಬಿಜೆಪಿಗೂ ವಿದಾಯ ಹೇಳಲಿದ್ದು, ಕಾಂಗ್ರೆಸ್​ಗೆ ಸೇರಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

    ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts