ರಾಣೆಬೆನ್ನೂರ: ಬೆನ್ನು ನೋವು ತಾಳಲಾರದೆ ವೃದ್ಧರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಸಿದ್ದೇಶ್ವರ ನಗರದಲ್ಲಿ ಬುಧವಾರ ಸಂಭವಿಸಿದೆ.
ಮುನಾಫ್ ಉಮರಸಾಬ ಖೋತವಾಲ (65) ಮೃತ ವೃದ್ಧ.
ಇವರಿಗಿದ್ದ ಬೆನ್ನು ನೋವಿನಿಂದ ಬೇಸತ್ತು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.