ಬೆಂಗಳೂರು: ಅಭಿಷೇಕ್ ಅಂಬರೀಶ್ ಅಭಿನಯದ ಎರಡನೇ ಚಿತ್ರ ‘ಬ್ಯಾಡ್ ಮ್ಯಾನರ್ಸ್’ನ ಚಿತ್ರೀಕರಣ ಕೊನೆಗೂ ಮುಕ್ತಾಯವಾಗಿದೆ. ಶನಿವಾರ ರಾತ್ರಿ ಚಿತ್ರೀಕರಣ ಮುಗಿದ ಸಂತೋಷದಲ್ಲಿ ಚಿತ್ರತಂಡದವರು ಕೇಕ್ ಕತ್ತರಿಸಿ ಸಂಭ್ರಮಪಟ್ಟಿದ್ದಾರೆ.
ಇದನ್ನೂ ಓದಿ: ಕಾಲಿವುಡ್ಗೆ ಹೊಂಬಾಳೆ ಎಂಟ್ರಿ; ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘು ತಥಾ’ ನಿರ್ಮಾಣ
ಅಭಿಷೇಕ್ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ‘ಅಮರ್’ ಬಿಡುಗಡೆ 2019ರಲ್ಲಿ. ಆ ನಂತರ ಒಂದು ವರ್ಷ ಸುಮ್ಮನಿದ್ದ ಅಭಿಷೇಕ್, 2020ರ ಲಾಕ್ಡೌನ್ ಮುಗಿದ ಮೇಲೆ, ಸೂರಿ ನಿರ್ದೇಶನದಲ್ಲಿ ‘ಬ್ಯಾಡ್ ಮ್ಯಾನರ್ಸ್’ ಎಂಬ ಚಿತ್ರದಲ್ಲಿ ನಟಿಸುವುದಾಗಿ ಘೋಷಿಸಿದರು. ಆ ನಂತರ ಕಳೆದ ವರ್ಷ ಚಿತ್ರದ ಚಿತ್ರೀಕರಣವೂ ಶುರುವಾಯಿತು. ಹೀಗೆ ಶುರುವಾದ ಚಿತ್ರೀಕರಣ, ಈಗ ಮುಕ್ತಾಯವಾಗಿದೆ.
‘ಬ್ಯಾಡ್ ಮ್ಯಾನರ್ಸ್’ ಚಿತ್ರದಲ್ಲಿ ಅಭಿಷೇಕ್, ರುದ್ರ ಎಂಬ ರಫ್ ಆಂಡ್ ಟಫ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಹುಟ್ಟಿನಿಂದಲೇ ಒರಟನಾಗಿರುವ ರುದ್ರ, ಪೊಲೀಸ್ ಇಲಾಖೆಯಲ್ಲಿ ಏನೆಲ್ಲ ಮಾಡುತ್ತಾನೆ ಎಂಬುದು ಚಿತ್ರದ ಕಥೆ. ಈಗಾಗಲೇ ಅಭಿಷೇಕ್ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಟೀಸರ್ ಬಿಡುಗಡೆಯಾಗಿ ಜನಪ್ರಿಯವಾಗಿದೆ.
ಚಿತ್ರದಲ್ಲಿ ಅಭಿಷೇಕ್ಗೆ ರಚಿತಾ ರಾಮ್ ಮತ್ತು ಪ್ರಿಯಾಂಕಾ ನಾಯಕಿಯರಾಗ ನಟಿಸಿದ್ದು, ತಾರಾ, ಶರತ್ ಲೋಹಿತಾಶ್ವ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಹುತೇಕ ಮುಗಿದಿದ್ದು, ಚಿತ್ರವು 2023ರ ಫೆಬ್ರವರಿಯಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಸ್ಟುಡಿಯೋ 18 ಬ್ಯಾನರ್ನಡಿ ಸುಧೀರ್ ಕೆ.ಎಂ ನಿರ್ಮಾಣ ಮಾಡುತ್ತಿದ್ದಾರೆ.
ಇದನ್ನೂ ಓದಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸುದೀಪ್ ದಂಪತಿ
ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಅಭಿಷೇಕ್ ಅಂಬರೀಶ್ ಅಭಿನಯದ ಮೂರನೆಯ ಚಿತ್ರವಾದ ‘ಕಾಳಿ’ ಚಿತ್ರದ ಚಿತ್ರೀಕರಣ ಇಷ್ಟರಲ್ಲಿ ಪ್ರಾರಂಭವಾಗಬೇಕಿತ್ತು. ಆದರೆ, ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಚಿತ್ರೀಕರಣ ವಿಳಂಬವಾದ್ದರಿಂದ, ‘ಕಾಳಿ’ಯ ಮುಹೂರ್ತವಾದರೂ, ಇನ್ನೂ ಚಿತ್ರೀಕರಣವಾಗಿರಲಿಲ್ಲ. ಈಗ ‘ಬ್ಯಾಡ್ ಮ್ಯಾನರ್ಸ್’ ಮುಗಿದಿರುವುದರಿಂದ, ‘ಕಾಳಿ’ ಸದ್ಯದಲ್ಲೇ ಪ್ರಾರಂಭವಾಗುವ ಸಾಧ್ಯತೆ ಇದೆ.
ಈ ಚಿತ್ರದಲ್ಲಿರೋದು ಒಂದೇ ಪಾತ್ರ … ‘ರಾಘು’ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಹೊಸ ಪ್ರಯೋಗ …