More

    ಬ್ಯಾಡಗಿ ವಿಧಾನ ಸಭೆಗೆ ಸ್ಪರ್ಧಿಸಲು ಸಿದ್ಧ: ಸುರೇಶಗೌಡ್ರ ಪಾಟೀಲ

    ಬ್ಯಾಡಗಿ: ನನ್ನ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನ ಮರೆತಿಲ್ಲ, ಪಕ್ಷ ಅವಕಾಶ ಕಲ್ಪಿಸಿದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ಹೇಳಿದರು.

    ಪಟ್ಟಣದ ಪಂಚಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿ ಹಾಗೂ ವಿದ್ಯಾನಗರದ ನಾಗರಿಕರು ಶನಿವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

    2009ರಲ್ಲಿ ಬ್ಯಾಡಗಿ ವಿಧಾನಸಭೆ ಮತಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕನಾಗಲು ಜನರು ಆಶೀರ್ವದಿದ್ದರು. ತಾಲೂಕಿಗೆ ಎರಡು ಪದವಿ ಕಾಲೇಜ್ ಮಂಜೂರು, ಪಟ್ಟಣಕ್ಕೆ ಯುಜಿಡಿ ಹಾಗೂ 24/7 ಕುಡಿಯುವ ನೀರು ಪೂರೈಕೆ ಯೋಜನೆ ಅನುಷ್ಠಾನ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ, ಮೆಣಸಿನಕಾಯಿ ಮಾರುಕಟ್ಟೆಯ 70 ಎಕರೆ ಪ್ರಾಂಗಣವನ್ನು ಸಂಪೂರ್ಣ ಕಾಂಕ್ರೀಟ್ ಮಾಡಲು ಶ್ರಮಿಸಿದ್ದೇನೆ. ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಅಭಿಮಾನಿಗಳು, ಕಾರ್ಯಕರ್ತರು ಸ್ಪರ್ಧಿಸಲು ಒತ್ತಾಯ ಮಾಡುತ್ತಿದ್ದು, ಪಕ್ಷ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದರು.

    ನಿವೃತ್ತ ಪ್ರಾಚಾರ್ಯ ಎಫ್.ಜಿ. ಬಣಕಾರ ಮಾತನಾಡಿ, ಸುರೇಶಗೌಡ್ರ ಪಾಟೀಲರು ನೇರ, ನಿಷ್ಠುರ ಹಾಗೂ ಖಡಕ್ ಮಾತಿನ ವಿಶೇಷ ವ್ಯಕ್ತಿ. ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ದೇಶದಲ್ಲಿ ಎರಡನೇ ಸ್ಥಾನಕ್ಕೇರಲು ಅವರ ಕೊಡುಗೆ ಅಪಾರವಿದೆ. ಅವರು ಪ್ರಶಸ್ತಿ ಹುಡುಕಿ ಹೋದವರಲ್ಲ, ಅವರ ಸಾಧನೆಗೆ ಸಂದ ಗೌರವವಾಗಿದೆ ಎಂದರು.

    ವಿವಿಧ ಸಂಘ, ಸಂಸ್ಥೆಗಳ ವತಿಯಿಂದ ಸುರೇಶಗೌಡ್ರ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts