More

    ಶರಣರನ್ನು ಜಾತಿಗೆ ಸೀಮಿತಗೊಳಿಸಬೇಡಿ

    ಬಾದಾಮಿ: ನಾಟಕ ರಂಗಭೂಮಿಯಲ್ಲಿ ಮೊಟ್ಟ ಮೊದಲು ಪುರುಷರು ಸ್ತ್ರೀ ಪಾತ್ರ ಮಾಡುತ್ತಿದ್ದರು. ಮೊದಲ ಬಾರಿಗೆ ಯಲ್ಲೂಬಾಯಿ ಎಂಬ ಮಹಿಳೆ ಸ್ತ್ರೀ ಪಾತ್ರಕ್ಕೆ ಬಣ್ಣ ಹಚ್ಚಿದರು ಎಂದು ಮಾಜಿ ಶಾಸಕ, ಸಾಹಿತಿ ಮಲ್ಲಿಕಾರ್ಜುನ ಬನ್ನಿ ಹೇಳಿದರು.

    ಬಾದಾಮಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಸ್ಥೆ ಸಹಯೋಗದಲ್ಲಿ ಪಟ್ಟಣದ ಜೆ.ಎಸ್.ಮಮದಾಪುರ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಸಾಣೆಹಳ್ಳಿ ಶಿವ ಸಂಚಾರ ಕಲಾವಿದರಿಂದ ನಾಟಕ ಹಬ್ಬ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ಹಿಂದೆ ರಾಜ್ಯದಲ್ಲಿ 64 ನಾಟಕ ಕಂಪನಿಗಳಿದ್ದವು. ಈಗ 8 ಕಂಪನಿಗಳು ಮಾತ್ರ ಉಳಿದಿವೆ. ನಾಟಕಗಳು, ದೃಶ್ಯ ಮಾಧ್ಯಮ ಬಹಳ ದಿನಗಳವರೆಗೆ ಮನಸ್ಸಿನಲ್ಲಿ ಉಳಿಯುತ್ತವೆ. ಶರಣರನ್ನು ಜಾತಿಗೆ ಸೀಮಿತಗೊಳಿಸಬೇಡಿ ಎಂದರು.

    ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ಮಹಾಂತೇಶ ಮಮದಾಪುರ ಅವರು ಮೊದಲಿನಿಂದಲೂ ಸಾಮಾಜಿಕ ಸೇವೆ ಮಾಡುತ್ತ ಬಂದಿದ್ದಾರೆ. ಅವರ ಕುಟುಂಬಕ್ಕೆ ಹೆಚ್ಚಿನ ಅಧಿಕಾರ ಸಿಗಲಿ ಎಂದರು.

    ರಾಜ್ಯ ಸಹಕಾರಿ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷ ಮಹಾಂತೇಶ ಮಮದಾಪುರ ಮಾತನಾಡಿದರು. ಪುರಸಭೆ ಸದಸ್ಯ ರಾಜಮಹ್ಮದ್ ಬಾಗವಾನ, ಬಸವರಾಜ ಪಾಟೀಲ, ಗ್ರಾಪಂ ಸದಸ್ಯ ಪಡಿಯಪ್ಪ ಬೆಳ್ಳಿಗುಂಡಿ ಹಾಜರಿದ್ದರು. ಡೋಹರ ಕಕ್ಕಯ್ಯ ನಾಟಕ ಪ್ರೇಕ್ಷಕರ ಮನಗೆದ್ದಿತು.



    ಶರಣರನ್ನು ಜಾತಿಗೆ ಸೀಮಿತಗೊಳಿಸಬೇಡಿ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts