More

    ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ

    ಬಾದಾಮಿ: ಕರ್ನಾಟಕದ ಹೃದಯ ಬೆಳಗಾವಿ ಸೇರಿ ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜೀತ ಪವಾರ ಅವರ ಹೇಳಿಕೆ ಪರಸ್ಪರ ಭಾಷಾ ವೈಷಮ್ಯವನ್ನು ಬಿತ್ತುವುದರ ಜತೆಗೆ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿದೆ. ಸೂರ್ಯ ಚಂದ್ರರಿರುವವರೆಗೂ ಬೆಳಗಾವಿಯನ್ನು ಕರ್ನಾಟಕದಿಂದ ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅದು ಕರ್ನಾಟಕದ ಅವಿಭಾಜ್ಯ ಅಂಗ ಎಂದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು ಹೇಳಿದರು.

    ತಾಲೂಕಿನ ಗೋವನಕೊಪ್ಪ ಗ್ರಾಮದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯಗಳ ಗಡಿ ಕುರಿತು ಮಹಾಜನ್ ವರದಿಯೇ ಅಂತಿಮ ಎನ್ನುವ ಜ್ಞಾನ ಅವರಿಗೆ ಇರಲಿಕ್ಕಿಲ್ಲ. ಮೊದಲು ಅವರು ಮಹಾಜನ್ ವರದಿಯನ್ನು ಅಧ್ಯಯನ ಮಾಡಿ ಮಾತನಾಡಲಿ. ಬೆಳಗಾವಿ ತನ್ನದೆಂದು ಸುಪ್ರೀಂಕೋರ್ಟ್‌ನಲ್ಲಿ ಹೂಡಿರುವ ದಾವೆ 16 ವರ್ಷವಾದರೂ ವಿಚಾರಣೆಗೆ ಬಾರದೆ ಹತಾಸೆಗೊಂಡಿರುವ ಮಹಾರಾಷ್ಟ್ರ ಸರ್ಕಾರ ಪದೇ ಪದೆ ಅರ್ಜಿಯನ್ನು ಬದಲಿಸುತ್ತಿರುವುದು ಮೂರ್ಖತನದ ಪರಮಾವಧಿ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts