More

    ಭದ್ರಾ ಜಲಾಶಯದಿಂದ ನೀರು ಬಿಡುಗಡೆ

    ಗದಗ: 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಯ ಮೂಲಕ ಹಾವೇರಿ, ಗದಗ ಮತ್ತು ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಗದಗ, ಬೆಟಗೇರಿ, ಹಾವೇರಿ, ರಾಣೆಬೆನ್ನೂರ, ಬ್ಯಾಡಗಿ, ಕೂಡ್ಲಗಿ, ಕೊಟ್ಟೂರು , ಹಗರಿಬೊಮ್ಮನಹಳ್ಳಿ ಮತ್ತು ಹಿರೇಕೆರೂರ ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಫೆಬ್ರುವರಿ 8 ರಂದು 2000 ಕ್ಯೂಸೆಕ್ಸ್, ಫೆಬ್ರುವರಿ 9 ರಂದು 2000 ಕ್ಯೂಸೆಕ್ಸ್,  ಫೆಬ್ರುವರಿ 10 ರ ರಾತ್ರಿ 10 ಗಂಟೆಯವರೆಗೆ 2000 ಕ್ಯೂಸೆಕ್ಸ್  ನೀರು  ಹರಿಸಲಾಗುವುದು.

    ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕು ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಫೆಬ್ರುವರಿ 18 ರಿಂದ 23 ರವರೆಗೆ ಪ್ರತಿ ದಿನ 500 ಕ್ಯೂಸೆಕ್‍ನಂತೆ ಒಟ್ಟು  3000 ಕ್ಯೂಸೆಕ್ಸ್ ನೀರು ಭದ್ರಾ ಜಲಾಶಯದಿಂದ  ತುಂಗಭದ್ರಾ ನದಿಗೆ ಹರಿಸಲಾಗುವುದು.

    ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲೀ ಹಾಗೂ ಜಾತ್ರಾ ಮಹೋತ್ಸವಗಳನ್ನು ಹಮ್ಮಿಕೊಳ್ಳೂವುದಾಗಲಿ, ಜನರು ಮತ್ತು ದನಕರುಗಳನ್ನು ನದಿಗೆ ಇಳಿಸುವುದಾಗಲೀ ಮತ್ತು ನಿರ್ಮಾಣ ಕಾಮಗಾರಿಗಳನ್ನು ನದಿಯಲ್ಲಿ ನಡೆಸುತ್ತಿರುವುದು ಇತ್ಯಾದಿ ಚಟುವಟಿಕೆಗಾಗಿ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸದರಿ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿರುವ ಅನಧಿಕೃತ ಪಂಪ್ ಸೆಟ್‍ಗಳಿಂದ ನೀರೆತ್ತುವುದನ್ನು ಸಹ ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಭದ್ರತಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts