More

    ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಮೇಳ

    ಬಾಗಲಕೋಟೆ: ಕೇಂದ್ರ ಸರ್ಕಾರದ ಆತ್ಮ ನಿರ್ಭರ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲೆಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಈ ಯೋಜನೆಯಡಿ ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ನೀಡುವ ಉದ್ದೇಶದಿಂದ ವಿವಿಧ ಬ್ಯಾಂಕ್‌ಗಳ ಮೂಲಕ ಸಾಲ ಮೇಳ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಹೇಳಿದರು.

    ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಸ್ಥರ ಆತ್ಮ ನಿಧಿ ಯೋಜನೆಯ ವಿವಿಧ ಬ್ಯಾಂಕ್‌ಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

    ಸರ್ಕಾರದ ಯೋಜನೆ ಅನುಷ್ಠಾನಕ್ಕೆ ವಿವಿಧ ಇಲಾಖೆಯೊಂದಿಗೆ ಜಿಲ್ಲೆಯ ಎಲ್ಲ ಬ್ಯಾಂಕರ್ಸ್‌ಗಳ ಸಹಕಾರ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳ ಅರ್ಹ ಲಾನುಭವಿಗಳಿಗೆ ಸಾಲ ವಿತರಿಸುವ ಕಾರ್ಯ ಶೇ.100 ಪ್ರಗತಿ ಸಾಧಿಸಬೇಕು ಎಂದರು.

    ಈ ಯೋಜನೆ ಕಳೆದ ವರ್ಷ ಜೂನ್ 1 ರಿಂದ ಪ್ರಾರಂಭವಾಗಿದ್ದು, ಪ್ರತಿ ಲಾನುಭವಿಗಳಿಗೆ ತಲಾ 10 ಸಾವಿರ ರೂ. ಸಾಲ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಒಟ್ಟು 6694 ಲಾನುಭವಿಗಳ ಪೈಕಿ 2334 ಜನರಿಗೆ ಮಾತ್ರ ಸಾಲ ಮಂಜೂರಾತಿ ನೀಡಲಾಗಿದೆ. 1940 ಮಂಜೂರಾತಿ ಪ್ರಕ್ರಿಯೆಯಲ್ಲಿದ್ದು, ಇನ್ನು 2420 ಬಾಕಿ ಉಳಿದಿವೆ. ಶೇ.34 ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ನಗರ ಸ್ಥಳೀಯ ಸಂಸ್ಥೆಗಳಾದ ಅಮೀನಗಡದಲ್ಲಿ 155 ಅರ್ಜಿಗಳ ಪೈಕಿ 39, ಬಾದಾಮಿ 328 ಪೈಕಿ 73, ಬಾಗಲಕೋಟೆ 776 ಪೈಕಿ 157, ಬೆಳಗಲಿ 180 ಪೈಕಿ 164, ಬೀಳಗಿ 172 ಪೈಕಿ 88, ಗುಳೇದಗುಡ್ಡ 278 ಪೈಕಿ 67, ಹುನಗುಂದ 251 ಪೈಕಿ 72, ಇಳಕಲ್ಲ 605 ಪೈಕಿ 256, ಜಮಖಂಡಿ 987 ಪೈಕಿ 343, ಕಮತಗಿ 152 ಪೈಕಿ 38, ಕೆರೂರ 350 ಪೈಕಿ 82, ಮಹಾಲಿಂಗಪುರ 488 ಪೈಕಿ 42, ಮುಧೋಳ 654 ಪೈಕಿ 210, ರಬಕವಿ ಬನಹಟ್ಟಿ 948 ಪೈಕಿ 517 ಹಾಗೂ ತೇರದಾಳ 362 ಪೈಕಿ 186 ಲಾನುಭವಿಗಳಿಗೆ ಮಾತ್ರ ಸಾಲ ವಿತರಣೆಗೆ ಮಂಜೂರಾತಿ ನೀಡಲಾಗಿದೆ. ಉಳಿದವರಿಗೆ ಯಾಕೆ ನೀಡಿಲ್ಲವೇ? ಎಂದು ಪ್ರಶ್ನಿಸಿದರು.

    ಜಿಪಂ ಸಿಇಒ ಟಿ.ಭೂಬಾಲನ್ ಮಾತನಾಡಿ, ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳ ಒಂದಕ್ಕೊಂದು ವಿಲೀನಗೊಂಡ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗೆ ವರ್ಗಾವಣೆಯಾಗಬೇಕಾದ 14 ಮತ್ತು 15ನೇ ಹಣಕಾಸಿನ ಯೋಜನೆಯಡಿ ಸರ್ಕಾರದಿಂದ ನಿಗದಿಪಡಿಸಲಾದ ಅನುದಾನ ತಾಂತ್ರಿಕ ಕಾರಣಗಳಿಂದ ತಟಸ್ಥಗೊಂಡಿದೆ. ಸರ್ಕಾರ ೆ. 15 ರೊಳಗಾಗಿ ವೆಚ್ಚ ಮಾಡಲು ಗಡುವು ನೀಡಿದ್ದು, ಬ್ಯಾಂಕರ್ಸ್‌ ಮುತುವರ್ಜಿವಹಿಸಿ ಹಣ ವರ್ಗಾವಣೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

    ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಉಕ್ಕಲಿ, ಕೆನರಾ ಬ್ಯಾಂಕ್ ರಿಜನಲ್ ಮ್ಯಾನೇಜರ್ ವೈ.ಸತೀಶಬಾಬು, ಜಿಲ್ಲಾ ಅಗ್ರಣಿ ಬ್ಯಾಂಕ್ ವ್ಯವಸ್ಥಾಪಕ ಪಿ.ಗೋಪಾಲರೆಡ್ಡಿ ಹಾಗೂ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಬ್ಯಾಂಕ್ ವ್ಯವಸ್ಥಾಪಕರು ಉಪಸ್ಥಿತರಿದ್ದರು.

    8 ರಂದು ಮೇಳ ಆಯೋಜನೆ
    ಬಾಕಿ ಸಾಲ ವಿತರಣೆಗೆ ಜಿಲ್ಲೆಯ 15 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಬೃಹತ್ ಸಾಲ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಿದ ಎಲ್ಲ ಅರ್ಹ ಲಾನುಭವಿಗಳಿಗೆ ಸಾಲ ವಿತರಣೆ ಕಾರ್ಯ ೆ.15 ರೊಳಗಾಗಿ ಪೂರ್ಣಗೊಳಿಸಬೇಕು. ಸಾಲ ಮೇಳದಲ್ಲಿಯೇ ಲಾನುವಿಗಳಿಗೆ ಮಂಜೂರಾತಿ ಆದೇಶ ನೀಡುವ ವ್ಯವಸ್ಥೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲವಾಗಲಿದೆ. ೆ.8 ರಂದು ಬಾಗಲಕೋಟೆಯ ಕಲಾಭವನದಲ್ಲಿ ಸಾಲ ಮೇಳ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ರಾಜೇಂದ್ರ ಬ್ಯಾಂಕರ್ಸ್‌ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.



    ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಮೇಳ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts