More

    ಪಿಕೆಪಿಎಸ್‌ನಲ್ಲಿ ಕೈ ಕೈ ಮಿಲಾಯಿಸಿದ ಕೆಲ ಸದಸ್ಯರು

    ಬಾಗಲಕೋಟೆ: ಪಿಕೆಪಿಎಸ್ ಸದಸ್ಯರ ಸಭೆಯಲ್ಲಿ ಯಾವುದೋ ಒಂದು ವಿಚಾರವಾಗಿ ಸದಸ್ಯರ ನಡುವೆ ಒಮ್ಮತ ಮೂಡದೆ ಪರಸ್ಪರ ಮಾತಿನ ಜಟಾಪಟಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೆಲವರು ಕೈ ಕೈ ಮಿಲಾಯಿಸಿರುವ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಬಳಿಯ ಅಕ್ಕಿಮರಡಿ ಗ್ರಾಮದಲ್ಲಿ ನಡೆದಿದೆ.

    ಸಭೆಯಲ್ಲಿ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಪಿಕೆಪಿಎಸ್ ಬಳಿ ದೊಡ್ಡ ಪ್ರಮಾಣದಲ್ಲಿ ಅವರ ಬೆಂಬಲಿಗ ಪಡೆ ಸೇರಿದ್ದರಿಂದ ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

    ಮುಂದಿನ ತಿಂಗಳು ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಡೆಯಲಿದೆ. ಇದರಲ್ಲಿ ಪ್ರತಿ ತಾಲೂಕಿನ ಪಿಕೆಪಿಎಸ್‌ಗಳಿಂದ ತಲಾ ಒಬ್ಬರು ಮತದಾನ ಮಾಡಬಹುದು. ಮತದಾನ ಯಾರು ಮಾಡಬೇಕು ಎನ್ನುವ ಬಗ್ಗೆ ಪಿಕೆಪಿಎಸ್ ಸದಸ್ಯರು ಸೇರಿ ಒಬ್ಬರಿಗೆ ಆ ಹಕ್ಕು ಕೊಡುತ್ತಾರೆ. ಈ ವಿಚಾರವಾಗಿ ಸಭೆಯಲ್ಲಿ ಕೆಲ ಮುಖಂಡರ ನಡುವೆ ನಾನಾ… ನೀನಾ… ಎನ್ನುವ ಪ್ರತಿಷ್ಠೆ ಜತೆಗೆ ಪಕ್ಷ ರಾಜಕೀಯವೂ ಸೇರಿದೆ. ಇದರಿಂದ ಮಾತಿಗೆ ಮಾತು ಬೆಳೆದು ಕೆಲವರಂತೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪರಿಸ್ಥಿತಿ ಕೈಮೀರಿದ್ದರಿಂದ ಅನಿವಾರ್ಯವಾಗಿ ಪೊಲೀಸರು ಲಾಠಿ ಬೀಸುವ ಪರಿಸ್ಥಿತಿ ನಿರ್ಮಾಣವಾಯಿತು. ಪಿಕೆಪಿಎಸ್ ಮುಂಭಾಗದಲ್ಲಿ ಸದಸ್ಯರ ಬೆಂಬಲಿಗರು ದೊಡ್ಡಮಟ್ಟದಲ್ಲಿ ಸೇರಿದ್ದಲ್ಲದೆ ಕೆಲವರು ಪಿಕೆಪಿಎಸ್ ಒಳಗಡೆ ನುಗ್ಗಲು ಯತ್ನಿಸಿದ್ದಾರೆ. ಇದರಿಂದ ಮುಂಜಾಗ್ರತೆ ಕ್ರಮವಾಗಿ ಪೊಲೀಸರು ಬೆತ್ತದ ರುಚಿ ತೋರಿಸಿ ಜನರನ್ನು ಚದುರಿಸಿದ್ದಾರೆ. ಜನರಿಗೆ ಲಾಠಿ ಬೀಸುವ ವಿಡಿಯೋ ಇದೀಗ ವೈರಲ್ ಆಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts