ಬಾಗಲಕೋಟೆ: ಬೈಕ್ ಎರಡಕ್ಕೆ ಕಾರು ಡಿಕ್ಕಿಯಾಗಿ ತಾಯಿ-ಮಗ ಸೇರಿದಂತೆ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿಕ ಭಾನುವಾರ ನಡೆದಿದೆ.
ಜಮಖಂಡಿ-ವಿಜಯಪುರ ಮಾರ್ಗದಲ್ಲಿ ದುರ್ಘಟನೆ ನಡೆದಿದ್ದು, ಓರ್ವ ಮಹಿಳೆ ಹಾಗೂ ಮೂವರು ಪುರುಷರು ಮೃತಪಟ್ಟಿದ್ದಾರೆ. ಮೃತರನ್ನು ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಹೊಕ್ಕುಂಡಿ ಗ್ರಾಮದವರಾದ ಹನುಮಂತ ಕಾಂಬಳೆ(38), ಅಮೋಘಿ ಡವಳೇಶ್ವರ (26) ಮತ್ತು ರಬಕವಿಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ಮಹದೇವ ಬಿದರಿ(32), ತಾಯಿ ಯಮನವ್ವ ಬಿದರಿ(58) ಎಂದು ಗುರುತಿಸಲಾಗಿದೆ.
ಕಾರು ಜಮಖಂಡಿಯಿಂದ ವಿಜಯಪುರಕ್ಕೆ ಹೊರಟಿತ್ತು. ಮೊದಲು ಬೈಕ್ ಒಂದಕ್ಕೆ ಡಿಕ್ಕಿ ಹೊಡೆದ ಬಳಿಕ ನೂರು ಮೀಟರ್ನಲ್ಲಿ ಮತ್ತೊಂದು ಬೈಕ್ಗೆ ಗುದ್ದಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ಬೆನ್ನಲ್ಲೇ ಎಸ್ಕೇಪ್ ಆಗಿರುವ ಕಾರು ಚಾಲಕನಿಗೆ ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್)
ಅಲ್ಲಿ ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ: ವಿವಾದಕ್ಕೆ ಎಡೆಮಾಡಿಕೊಟ್ಟ ಬಾಂಬೆ ಹೈಕೋರ್ಟ್ ತೀರ್ಪು!
ಸ್ನೇಹಿತರಿಬ್ಬರ ಮಧ್ಯೆ ಎಂಟ್ರಿ ಕೊಟ್ಟ ಯುವತಿ: ಮುಂದೆ ನಡೆದಿದ್ದು ಟಿಕ್ಟಾಕ್ ಸ್ಟಾರ್ ದುರಂತ ಅಂತ್ಯ!
ಸಲಿಂಗ ವಿವಾಹವಾದ ಒಂದೇ ವರ್ಷದಲ್ಲಿ ಯುವತಿಯ ದುರಂತ ಸಾವು: ಇಬ್ಬರ ನಡುವೆ ನಡೆದಿದ್ದಾದರೂ ಏನು?