More

    ಒಂದು ಗಂಟೆ ಮೊದಲೇ ಹಾಜರಾಗಿ

    ಬಾಗಲಕೋಟೆ: ಕರೊನಾ ಭೀತಿ ಹಿನ್ನೆಲೆ ಲಾಕ್‌ಡೌನ್‌ದಿಂದ ಮುಂದೂಡಲಾಗಿದ್ದ ದ್ವಿತೀಯ ಪಿಯು ಇಂಗ್ಲಿಷ್ ವಿಷಯ ಪರೀಕ್ಷೆಯನ್ನು ಜೂನ್ 18 ರಂದು ಜಿಲ್ಲಾದ್ಯಂತ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆ ನಡೆಯುವ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದರು.

    ಜಿಲ್ಲಾಡಳಿತ ಭವನದಲ್ಲಿರುವ ನೂತನ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ದ್ವಿತೀಯ ಪಿಯು ಇಂಗ್ಲಿಷ್ ವಿಷಯ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್, ಕೈಗಳಿಗೆ ಸ್ಯಾನಿಟೈಸರ್ ಮಾಡಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಗುತ್ತಿರುವುದರಿಂದ ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭದ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಬೇಕು ಎಂದರು.

    ಜಿಲ್ಲೆಯಲ್ಲಿ 37 ಪರೀಕ್ಷಾ ಕೇಂದ್ರಗಳಿದ್ದು, 21,011 ವಿದ್ಯಾರ್ಥಿಗಳು ಇಂಗ್ಲಿಷ್ ವಿಷಯ ಪರೀಕ್ಷೆ ಬರೆಯಲಿದ್ದಾರೆ. ಈ ಹಿಂದೆ ಇಂಗ್ಲಿಷ್ ವಿಷಯ ಪರೀಕ್ಷೆ ಕುಳಿತವರು 20,618 ಇತ್ತು, ಆದರೆ, ಕೋವಿಡ್ ಹಿನ್ನೆಲೆ ವಿದ್ಯಾರ್ಥಿಗಳಿಗೆ ತಮ್ಮ ತಮ್ಮ ಜಿಲ್ಲೆಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದರಿಂದ ಜಿಲ್ಲೆಯಿಂದ 314 ವಿದ್ಯಾರ್ಥಿಗಳು ಬೇರೆ ಜಿಲ್ಲೆಗೆ ಹೋಗಿದ್ದಾರೆ. ಬೇರೆ ಜಿಲ್ಲೆಯ 707 ವಿದ್ಯಾರ್ಥಿಗಳು ನಮ್ಮ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಪರಸ್ಪರ ಅಂತರ ಕಡ್ಡಾಯವಾಗಿ ಪಾಲಿಸುವ ಮೂಲಕ ಜಿಗ್‌ಜಾಗ್ ರೀತಿಯಲ್ಲಿ ಆಸನದ ವ್ಯವಸ್ಥೆ ಮಾಡಲಾಗುತ್ತಿರುವುದಾಗಿ ತಿಳಿಸಿದರು.

    ಪರೀಕ್ಷೆಗೆ ಬರುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ಆರೋಗ್ಯ ಸಹಾಯಕರನ್ನು ನಿಯೋಜಿಸಲಾಗುತ್ತಿದೆ. ಇಲಾಖೆ ಮಾರ್ಗದರ್ಶನದಂತೆ ಬೇರೆ ಜಿಲ್ಲೆಯ ಪರೀಕ್ಷಾ ಕೇಂದ್ರದಿಂದ ಆಗಮಿಸಿದ ಹೊಸದಾಗಿ ಪ್ರವೇಶ ಪತ್ರ ತರದೇ ಇರುವುದರಿಂದ ಬಂದಿರುವ ಲಿಸ್ಟ್‌ನ್ನು ಪರಿಶೀಲಿಸಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಾಗುತ್ತಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರುವಂತೆ ತಿಳಿಸಬೇಕು. ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು 200 ಮಾಸ್ಕ್‌ಗಳನ್ನು ಇಟ್ಟುಕೊಳ್ಳಲು ಸೂಚಿಸಿದರು. ಪ್ರತಿಯೊಂದು ಕೊಠಡಿಯನ್ನು ಸ್ಯಾನಿಟೈಜೇಷನ್ ಮಾಡಬೇಕು ಎಂದು ಸೂಚನೆ ನೀಡಿದರು.

    ಪರೀಕ್ಷೆ ದಿನದಂದು ಕೇಂದ್ರದ ಸುತ್ತಮುತ್ತಲೂ 200 ಮೀಟರ್ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ನೇಮಕೊಂಡ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಹೊರತುಪಡಿಸಿ ಉಳಿದ ವ್ಯಕ್ತಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಅಲ್ಲದೆ, ಈ ವ್ಯಾಪ್ತಿಯಲ್ಲಿ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸುವುದಾಗಿ ತಿಳಿಸಿದರು. ಸೂಕ್ತ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದು ಎಂದು ಹೇಳಿದರು.

    ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮಾತನಾಡಿ, ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ಕ್ರಮಕೈಗೊಳ್ಳಲಾಗುತ್ತಿದ್ದು, ಪರೀಕ್ಷೆಯ ಪಾವಿತ್ರೃತೆಯನ್ನು ಕಾಪಾಡಿಕೊಂಡು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ತನ್ಮೂಲಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಲು ತಿಳಿಸಿದರು.

    ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಬಿರಾದಾರ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ ಸೇರಿ ಆಯಾ ತಾಲೂಕಿನ ತಹಸೀಲ್ದಾರರು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.

    ಮಾಧ್ಯಮದವರಿಗೆ ಪ್ರವೇಶ ನಿಷೇಧ
    ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶೀಧರ ಪೂಜಾರಿ ಪರೀಕ್ಷಾ ಸಿದ್ಧತೆ ಕುರಿತು ವಿವರಿಸುತ್ತ ಜಿಲ್ಲೆಯಲ್ಲಿ 37 ಪರೀಕ್ಷಾ ಕೇಂದ್ರಗಳಿದ್ದು, 24 ವಿದ್ಯಾರ್ಥಿಗಳಿಗೆ ಒಂದು ಪರೀಕ್ಷಾ ಕೊಠಡಿಯಂತೆ ಒಟ್ಟು 955 ಪರೀಕ್ಷಾ ಕೊಠಡಿಗಳನ್ನು ಮಾಡಲಾಗಿದೆ. ಅವಶ್ಯಕತೆ ಇರುವಷ್ಟು ಕೊಠಡಿ ಮೇಲ್ವಿಚಾರಕರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ನಿಯೋಜನೆ ಮಾಡಲಾಗಿದೆ. ಪರೀಕ್ಷಾ ಸಿಬ್ಬಂದಿಗೆ ಗುರುತಿನ ಚೀಟಿ ನೀಡಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಮಾಧ್ಯಮದವರಿಗೆ ಪ್ರವೇಶ ನಿಷೇಧ ಇರುವುದಾಗಿ ತಿಳಿಸಿದರು.

    ಜಿಲ್ಲೆಯ ಬೇರೆ ಬೇರೆ ಭಾಗಗಳಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಿ ಬರಲು ಉಚಿತವಾಗಿ ಸಂಚರಿಸಲು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಆಯಾ ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳ ಪಟ್ಟಿಯನ್ನು ಮಾಡಿಕೊಂಡು ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ವಿದ್ಯಾರ್ಥಿಗಳು ಸ್ಮಾರ್ಟ್‌ಪಾಸ್, ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
    ಕೆ.ರಾಜೇಂದ್ರ, ಜಿಲ್ಲಾಧಿಕಾರಿ





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts