More

    ಉಪಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

    ಬಾಗಲಕೋಟೆ: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಫೆ.11 ರಿಂದ 16 ವರೆಗೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

    11 ರಂದು ಬೆಳಗ್ಗೆ 11ಗಂಟೆಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರಾಜ್ಯ ವಿದ್ಯುತ್ ಪ್ರಸರಣ ನಿಗಮ ಹಾಗೂ ಹೆಸ್ಕಾಂ ಕಂಪನಿಗಳಿಗೆ ಸಂಬಂಧಿಸಿದ ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 2.30ಕ್ಕೆ ಮುಧೋಳಕ್ಕೆ ಆಗಮಿಸಿ ಮುಧೋಳ ಮತಕ್ಷೇತ್ರದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

    12 ರಂದು ಬೆಳಗ್ಗೆ 9ಕ್ಕೆ ಮುಧೋಳದಿಂದ ಬಾದಾಮಿ ತಾಲೂಕಿನ ಮುಷ್ಟಿಗೇರಿ ಗ್ರಾಮಕ್ಕೆ ಪ್ರಯಾಣ ಬೆಳೆಸಿ 10 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಕಟ್ಟಡದ ಭೂಮಿಪೂಜೆ ಸಮಾರಂಭ, ಮಧ್ಯಾಹ್ನ 12 ರಿಂದ 1 ರವರೆಗೆ ಪಟ್ಟದಕಲ್ಲಿನ ಪ್ರವಾಸೋದ್ಯಮ ಇಲಾಖೆಯ ಉದ್ದೇಶಿತ ಸಮಗ್ರ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಯ ಅಡಿಗಲ್ಲು ಸಮಾರಂಭದಲ್ಲಿ ಪಾಲ್ಗೊಂಡು ನಂತರ ಬಾದಾಮಿಯ ಹೆಸ್ಕಾಂ ಕಂಪನಿಯ ನೂತನ ಉಪ ವಿಭಾಗ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4ಕ್ಕೆ ಜಮಖಂಡಿಗೆ ಆಗಮಿಸಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 5.30ಕ್ಕೆ ಮುಧೋಳಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.

    13 ರಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಮುಧೋಳ ಕ್ಷೇತ್ರದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಿಜಯಪುರಕ್ಕೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ. 15 ರಂದು ಮಧ್ಯಾಹ್ನ 2ಕ್ಕೆ ವಿಜಯಪುರದಿಂದ ಬನಹಟ್ಟಿಗೆ ಆಗಮಿಸಿ ಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಿಜಯಪುರಕ್ಕೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ.

    16 ರಂದು ಮಧ್ಯಾಹ್ನ 1ಕ್ಕೆ ವಿಜಯಪುರ ಪ್ರವಾಸದ ನಂತರ ಬಾಗಲಕೋಟೆಗೆ ಆಗಮಿಸಿ ತೋವಿವಿಯ ಆವರಣದಲ್ಲಿ ಬಾಗಲಕೋಟೆ ಮತ್ತು ಬಾದಾಮಿ ತಾಲೂಕಿನ ಪ್ರಗತಿಪರ ರೈತರಿಗೆ ಅಟಲ್ ಭೂಜಲ ಯೋಜನೆಯ ಮಾಹಿತಿ ಹಾಗೂ ತರಬೇತಿ ಕಾರ್ಯಾಗಾರ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5ಕ್ಕೆ ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts