More

    ಶಿಲ್ಪ ಕಲೆ ಕಡೆ ಆಸಕ್ತಿ ಬೆಳೆಸಿಕೊಳ್ಳಿ

    ಬಾಗಲಕೋಟೆ: ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣೆ ದಿನಾಚರಣೆ ಶುಕ್ರವಾರ ಆಚರಿಸಲಾಯಿತು.

    ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕೆ.ರಾಜೇಂದ್ರ, ಜಿಪಂ ಸಿಇಒ ಟಿ.ಭೂಬಾಲನ್ ಸೇರಿದಂತೆ ಇತರ ಅಧಿಕಾರಿಗಳು ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು.

    ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಅಮರ ಶಿಲ್ಪಿ ಜಕಣಾಚಾರಿ ಹಲವಾರು ದೇವರ ಮೂರ್ತಿಗಳ ಕೆತ್ತನೆ ಮಾಡಿದ್ದಾರೆ. ಇಂತಹ ಕಲೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ತಮ್ಮ ಮಕ್ಕಳಿಗೆ ಶಿಕ್ಷಣದ ಜತೆಗೆ ಶಿಲ್ಪ ಕಲೆ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವಾಗಬೇಕು. ಶಿಲ್ಪ ಕಲೆಗೆ ವಿದೇಶದಲ್ಲಿ ಹೆಚ್ಚಿನ ಬೇಡಿಕೆ ಇದ್ದು, ಲಕ್ಷಾಂತರ ಹಣ ವ್ಯಯ ಮಾಡಿ ಕೊಂಡುಕೊಳ್ಳುತ್ತಿದ್ದಾರೆ. ಇಂತಹ ಕಲೆ ಉಳಿಸಿ ಬೆಳಿಸಿದಾಗ ಮಾತ್ರ ಜಕಣಾಚಾರಿ ಅವರಿಗೆ ಗೌರವ ದೊರೆಯುತ್ತದೆ ಎಂದರು.

    ಮುರನಾಳ ಮಳೆರಾಜೇಂದ್ರ ಮಠದ ಮುರುಘರಾಜೇಂದ್ರ ಶ್ರೀಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಹೇಮಾವತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ ಸೇರಿದಂತೆ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಸಂಗಮೇಶ ಹಡಗಲಿ ಹಾಗೂ ಇತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಜಕಣಾಚಾರಿ ಕೆತ್ತನೆಗಳ ಪ್ರದರ್ಶನ
    ಸುಗತೇಕರ ಗೋಂದಲಗೇರಿ ಕಲಾ ತಂಡದಿಂದ ಜಕಣಾಚಾರಿ ಕುರಿತು ಜಾನಪದ ಹಾಡಿದರೆ, ಅನುಷಾ ಪತ್ತಾರ ವಿಶ್ವಕರ್ಮ ಸಮಾಜದ ಕುರಿತು ಹಾಡಿದರು. ಅಲ್ಲದೆ, ಜಕಣಾಚಾರಿ ಅವರ ಶಿಲ್ಪ ಕೆತ್ತನೆಗಳ ಪರಿಚಯವನ್ನು ಪಿಪಿಟಿ ಮೂಲಕ ಮಾಡಿಕೊಡಲಾಯಿತು. ಗದಗಿನ ತ್ರಿಕುಟೇಶ್ವರ ದೇವಸ್ಥಾನದಲ್ಲಿನ ಕದಂಬ ಶಿಲ್ಪಕಲೆ, ಚನ್ನಕೇಶವ ದೇವಾಲಯದಲ್ಲಿನ ಕೃಷ್ಣಲೀಲೆ, ವೀರನಾರಾಯಣ ದೇವರ ಕೆತ್ತನೆ, ಬೇಲೂರಿನ ಕಪ್ಪೆ ಚನ್ನಿಗರಾಯಣ ಮೂರ್ತಿ, ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನ ಕೆತ್ತನೆಗಳ ಚಿತ್ರಗಳನ್ನು ಪ್ರದರ್ಶಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts