More

    ಸ್ವಂತ ತಂದೆಯನ್ನೇ 30 ತುಂಡು ಮಾಡಿದ ಮಗ!

    ಬಾಗಲಕೋಟೆ: ಪ್ರಿಯತಮೆಯನ್ನ ಪ್ರಿಯಕರನೇ ಕೊಂದು ಆಕೆಯ ದೇಹವನ್ನ 35 ತುಂಡುಗಳಾಗಿ ಕತ್ತರಿಸಿ ಪ್ರಿಡ್ಜ್​ನಲ್ಲಿಟ್ಟು ಇತ್ಯ ಒಂದೊಂದು ತುಂಡನ್ನು ರಾಷ್ಟ್ರರಾಜಧಾನಿ ದೆಹಲಿಯ ವಿವಿಧೆಡೆ ಎಸೆದ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿತ್ತು. ಮುಂಬೈ ಯುವತಿ ಶ್ರದ್ಧಾಳ ಭೀಕರ ಕೊಲೆ ಪ್ರಕರಣ ಮಾಸುವ ಮುನ್ನವೇ ಕರ್ನಾಟಕದಲ್ಲಿ ಇಂತಹದ್ದೇ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ.

    ನನ್ನ ಗಂಡ ಒಂದು ವಾರದಿಂದ ಕಾಣಿಸ್ತಿಲ್ಲ. ನನಗೆ ನನ್ನ ಮಗನ ಮೇಲೆ ಅನುಮಾನ ಇದೆ. ದಯವಿಟ್ಟು ತನಿಖೆ ಮಾಡಿ ಹುಡುಕಿಕೊಡಿ ಸರ್​… ಎಂದು ಮಹಿಳೆಯೊಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿ ಮಗನನ್ನ ವಶಕ್ಕೆ ಪಡೆದು ತನಿಖೆ ಶುರು ಮಾಡುತ್ತಿದ್ದಂತೆ ಘೋರ ರಹಸ್ಯ ಬಯಲಾಗಿದೆ. ಜನ್ಮ ಕೊಟ್ಟ ತಂದೆಯನ್ನೇ ಕೊಂದು ಶವವನ್ನು ತುಂಡು ತುಂಡು ಮಾಡಿ ಕೊಳವೆಬಾವಿಗೆ ತುರುಕಿರುವುದಾಗಿ ಬಾಯ್ಬಿಟ್ಟಿದ್ದು, ಸ್ಥಳದಲ್ಲಿ ಮೃತದೇಹ ಪತ್ತೆ ಕಾರ್ಯಾಚರಣೆ ಮಂಗಳವಾರ ಬೆಳಗ್ಗೆಯಿಂದ ನಡೆಯುತ್ತಿದ್ದು, ಶವದ ತುಂಡುಗಳು ಪತ್ತೆಯಾಗುತ್ತಿವೆ…

    ಮುಧೋಳ ನಗರದ ಪರಶುರಾಮ ಕುಳಲಿ(54) ಕೊಲೆಯಾದ ತಂದೆ. ಮಗ ವಿಠ್ಠಲ ಕುಳಲಿ(20) ಕೊಲೆ ಆರೋಪಿ. ಡಿ.6ರ ರಾತ್ರಿ 12 ಗಂಟೆಯಲ್ಲಿ ರಾಡ್​ನಿಂದ ಹಲ್ಲೆ ಮಾಡಿ ತಂದೆಯನ್ನು ಕೊಂದ ಮಗ, ಬಳಿಕ ಯಾರಿಗೂ ಅನುಮಾನ ಬಾರದಿರಲೆಂದು ಮೃತದೇಹವನ್ನು ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿ ಇರುವ ತನ್ನ ಹೊಲಕ್ಕೆ ತೆಗೆದುಕೊಂಡು ಹೋಗಿದ್ದಾನೆ. ಮುಚ್ಚಿದರೆ ಗೊತ್ತಾಗಬಹುದೆಂದು, ಕೊಳವೆಬಾವಿಗೆ ಹಾಕಲು ಯತ್ನಿಸಿದ್ದಾನೆ. ದೇಹ ಒಳಗೆ ತೂರುತ್ತಿಲ್ಲ ಎಂದು ಶವವನ್ನು ಕೊಡಲಿಯಿಂದ ತುಂಡು ತಂಡು ಮಾಡಿ ಕೊಳವೆಬಾವಿಗೆ ಹಾಕಿದ್ದಾನೆ. ಬಳಿಕ ಒಂದು ವಾರ ಏನೂ ಅರಿಯದಂತೆ ಊರಲ್ಲಿ ಓಡಾಡಿಕೊಂಡಿದ್ದ. ಅನುಮಾನಗೊಂಡ ತಾಯಿ, ಮುಧೋಳ ಠಾಣೆಯಲ್ಲಿ ಮಿಸ್ಸಿಂಗ್​ ಕೇಸ್​ ದಾಖಲಿಸಿದ್ದರು. ಪೊಲಿಸರು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾ ಸತ್ಯ ಬಾಯ್ಬಿಟ್ಟಿದ್ದಾನೆ.

    ಐವತ್ತು ಸಾವಿರ ರೂಪಾಯಿಗೆ ಆರಂಭವಾದ ತಂದೆ ಹಾಗೂ ಮಗನ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕಬ್ಬಿ‌ನ ಗ್ಯಾಂಗ್​ನಲ್ಲಿ ಕೆಲಸ ಮಾಡಿದ ಐವತ್ತು ಸಾವಿರ ಕೂಲಿ ಹಣವನ್ನು ಮಗ ವಿಠ್ಠಲ ಮನೆಗೆ ತಂದಿದ್ದ. ದುಡ್ಡು ಬಂದ ವಿಚಾರ ತಿಳಿದು ತನಗೆ ದುಡ್ಡು ಕೊಡುವಂತೆ ಮಗನೊಂದಿಗೆ ತಂದೆ ಜಗಳವಾಡಿದ್ದಾನೆ. ಡಿ.6 ರಂದು ಈ ಘಟನೆ ನಡೆದಿದೆ. ಮಗ ವಿಠ್ಠಲ ಜಮೀನಿನಲ್ಲಿ ನೀರು ಹಾಯಿಸುವಾಗ ಜಗಳ ಆರಂಭವಾಗಿದೆ. ಮದಲು ಮಗನ ಮೇಲೆ ತಂದೆ ಪರಶುರಾಮ ಕುಳಲಿ ಹಲ್ಲೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಮಗ, ತಂದೆಯೊಂದಿಗೆ ಜಗಳಕ್ಕಿಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಅಲ್ಲಿಯೇ ಇದ್ದ ಕಬ್ಬಿಣದ ರಾಡ್​ನಿಂದ ತಂದೆ ಹಲ್ಲೆ ಮಾಡಿದ್ದಾನೆ. ಪರಿಣಾಮ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ಕೊಲೆ ಮಾಡಿದ ಬಳಿಕ ಜಮೀನಿನಲ್ಲೇ ಇದ್ದ ನಿರುಪಯುಕ್ತ ಕೊಳವೆ ಬಾವಿಯಲ್ಲಿ ಶವವನ್ನು ಹಾಕಲು ಮಗ ಪ್ರಯತ್ನಿಸಿದ್ದಾರೆ. ಇಡೀ ದೇಹ ಕೊಳವೆ ಬಾವಿಯೊಳಗೆ ಹೊಗದಿದ್ದಾಗ ಅಲ್ಲೇ ಇದ್ದ ಕೊಡಲಿಯಿಂದ ತಂದೆಯ ದೇಹವನ್ನು ತುಂಡರಿಸಿದ ಮಗ, ದೇಹದ ತುಂಡುಗಳನ್ನ ಒಂದೊಂದಾಗಿ ನಿರುಪಯುಕ್ತ ಕೊಳವೆ ಬಾವಿಗೆ ಹಾಕಿ ಮಣ್ಣು ಮುಚ್ಚಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ತಂದೆ ಮತ್ತು ಮಗನ ನಡುವೆ ನಡೆದಿರುವ ಘಟನೆ ಇದಾಗಿದೆ.

    ಕೊಲೆಯಾದ ಪರಶುರಾಮ ಎಲ್ಲೂ ಕಾಣದೇ ಇದ್ದಾಗ ಮೃತನ ಪತ್ನಿ ಸರಸ್ವತಿಯಿಂದ ಮುಧೋಳ ಠಾಣೆಗೆ ದೂರು ದಾಖಲಾದಾಗ ಕುಟುಂಬಸ್ಥರನ್ನು ತನಿಖೆಗೆ ಒಳಪಡಿಸಲಾಯಿತು. ಮಗ ವಿಠ್ಠಲನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಮುಧೋಳ ನಗರದ ಹೊರವಲಯದಲ್ಲಿ ಮಂಟೂರ ರಸ್ತೆಯ ಜಮೀನಿನಲ್ಲಿ ಘಟನೆ ನಡೆದಿದೆ.

    ಕೇವಲ ಮಗ ಮಾತ್ರ ಅಲ್ಲ ಮಗನ ಸ್ನೇಹಿತ ಕೂಡ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಬಾಗಲಕೋಟೆಯ ನವನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ ಮಾಹಿತಿ ನೀಡಿದ್ದಾರೆ. ತನಿಖೆಯಲ್ಲಿ ಮತ್ತೊಬ್ಬ ಆರೋಪಿ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್​)

    ಪ್ರಿಯಕರನ ಕಬ್ಬಿನ ಗದ್ದೆಯಲ್ಲಿ ಯುವತಿ ಶವ! ಗಂಡನನ್ನು ಬಿಟ್ಟು ಬಂದವಳು ದುರಂತ ಸಾವು, ಹಾಸನದಲ್ಲಿ ಘಟನೆ

    ರಿಷಭ್​ ಶೆಟ್ಟಿ ಕಂಡರೆ ಹೊಟ್ಟೆಕಿಚ್ಚಂತೆ! ಕಾಂತಾರ ಯಶಸ್ಸಿನ ಬಗ್ಗೆ ನವಾಜುದ್ದೀನ್​ ಸಿದ್ದಿಖಿ ಆಡಿದ ಮಾತುಗಳಿವು…

    PHOTO Gallery | ಮಾಡೆಲ್ ಅವಿವಾ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡ ಅಭಿಷೇಕ್ ಅಂಬರೀಷ್; ಇಲ್ಲಿವೆ ನೋಡಿ ಎಂಗೇಜ್ಮೆಂಟ್ ಫೋಟೋಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts