More

    ಟಿಇಟಿ ಪರೀಕ್ಷಾ ಕೇಂದ್ರಕ್ಕೆ ಸಿಇಓ ಭೂಬಾಲನ ಭೇಟಿ ಪರಿಶೀಲನೆ

    ಬಾಗಲಕೋಟೆ: ಜಿಲ್ಲೆಯಲ್ಲಿ ಭಾನುವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷಾ (ಟಿಇಟಿ) ಕೇಂದ್ರವಾದ ನವನಗರದ ಅಂಜುಮನ್ ಬಾಲಕರ ಪ್ರೌಢಶಾಲೆಗೆ ಜಿ.ಪಂ ಸಿಇಒ ಟಿ.ಭೂಬಾಲನ ಭೇಟಿ ನೀಡಿ ಪರಿಶೀಲಿಸಿದರು.

    ಈ ಸಂದರ್ಭದಲ್ಲಿ ಕೋವಿಡ್-19 ಹಿನ್ನಲೆಯಲ್ಲಿ ಸುರಕ್ಷಿತ ಕ್ರಮಗಳ ಬಗ್ಗೆ ಪರಿಶೀಲಿಸಿದರು. ಪರೀಕ್ಷಾ ಕೇಂದ್ರದಲ್ಲಿ ಅರ್ಭ್ಯರ್ಥಿಗಳ ಹಾಜರಾತಿ, ಗೈರು ಆದವರ ಮಾಹಿತಿಯನ್ನು ಕೇಂದ್ರದ ಮುಖ್ಯ ಅಧೀಕ್ಷಕರಿಂದ ಪಡೆದುಕೊಂಡರು.

    ಟಿಇಟಿ ಪರೀಕ್ಷೆಗಳು ಎರಡು ಅವಧಿಯಲ್ಲಿ ನಡೆಸಿದ್ದು, ಬೆಳಗಿನ ಅವಧಿಯ ಪತ್ರಿಕೆ-1ರ ಪರೀಕ್ಷೆಗೆ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ನೋಂದಣಿಯಾದ ಒಟ್ಟು 2798 ಅಭ್ಯರ್ಥಿಗಳ ಪೈಕಿ 2239 ಅಭ್ಯರ್ಥಿಗಳು ಹಾಜರಾಗಿ 559 ಅಭ್ಯರ್ಥಿಗಳು ಗೈರು ಹಾಜರಾಗಿರುತ್ತಾರೆ. ಎರಡನೇ ಅವಧಿಯ ಮಧ್ಯಾಹ್ನ ನಡೆದ ಪತ್ರಿಕೆ-2ರ ಪರೀಕ್ಷೆಯಲ್ಲಿ ನೋಂದಣಿಯಾದ ಒಟ್ಟು 6370 ಅಭ್ಯರ್ಥಿಗಳ ಪೈಕಿ 5594 ಜನ ಹಾಜರಾಗಿ 776 ಜನ ಗೈರು ಹಾಜರಾಗಿರುತ್ತಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ ತಿಳಿಸಿದ್ದಾರೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts