More

    ಉನ್ನತ ಸ್ಥಾನ ಅಲಂಕರಿಸಿ

    ಬಾಗಲಕೋಟೆ: ಇಂದು ಬರಿ ಪದವಿ ಪಡೆದರೆ ಉಪಯೋಗವಿಲ್ಲ. ಓದಿದರೆ ಉತ್ತಮ ಅಂಕ ಪಡೆದು ಐಎಎಸ್, ಕೆಎಎಸ್‌ನಂತರ ಉನ್ನತ ಹುದ್ದೆ ಅಲಂಕರಿಸಬೇಕು. ಇಲ್ಲದಿದ್ದರೆ ಸಾಮಾನ್ಯ ವ್ಯಕ್ತಿಯಾಗಿ ದುಡಿದು ಜೀವನ ಮಾಡಬೇಕು ಎಂದು ತಿಂಥಣಿ ಕನಕಗುರು ಪೀಠದ ಸಿದ್ದರಾಮಾನಾಂದಪುರಿ ಮಹಾಸ್ವಾಮಿಗಳು ಹೇಳಿದರು.

    ನಗರದ ಕಾಳಿದಾಸ ಕಲ್ಯಾಣ ಮಂಟಪದಲ್ಲಿ ಭಾನುವಾರ ಕರ್ನಾಟಕ ಕುರುಬರ ಸಂಘದ ಜಿಲ್ಲಾ ಘಟಕ, ಸಮಾಜದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ-2020 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಬಿಎ,ಬಿಕಾಂ ಓದಿದರೆ ಯಾವುದೇ ಪ್ರಯೋಜನ ಇಲ್ಲ. ಗುರಿ ಒಟ್ಟುಕೊಂಡು ಓದಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಅಂಕ ಪಡೆದು ಉನ್ನತ ಹುದ್ದೆಗೆ ಆಯ್ಕೆಯಾದರೆ ಭವಿಷ್ಯದಲ್ಲಿ ಜೀವನ ಸಾರ್ಥಕವಾಗುತ್ತದೆ. ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ ಎಚ್.ವೈ.ಮೇಟಿ, ಜಿ.ಪಂ. ಮಾಜಿ ಸದಸ್ಯ ಎಸ್.ಡಿ.ಜೋಗಿನ, ಸಮಾಜದ ಮುಖಂಡರಾದ ರಕ್ಷಿತಾ ಭರತಕುಮಾರ ಈಟಿ, ಭೀಮಸೇನ ಚಿಮ್ಮನಕಟ್ಟಿ ಮಾತನಾಡಿದರು. ಮುಗಳಖೋಡ ಕನಕಬ್ರಹ್ಮ ವಿದ್ಯಾಶ್ರಮದ ಚಿನ್ಮಯಾನಂದ ಸ್ವಾಮೀಜಿ, ಮಕನಾಪೂರ ಸೋಮಲಿಂಗೇಶ್ವರ ಗುರುಪೀಠದ ಸೋಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದು ಅಂದಾಜು 250 ಕ್ಕೂ ಹೆಚ್ಚು ಕುರುಬ ಸಮಾಜದ ವಿದ್ಯಾಥಿಗಳನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ಜಿ.ಪಂ.ಸದಸ್ಯ ಆಸೆಂಗೆಪ್ಪ ನಕ್ಕರಗುಂದಿ, ರಾಜ್ಯ ಕುರುಬರ ಸಂಘದ ನಿರ್ದೇಶಕ ಶ್ರೀಶೈಲ ದಳವಾಯಿ, ಮುಖಂಡರಾದ ಶಶಿಕಾಂತ ಉದಗಟ್ಟಿ, ಹನಮಂತ ಅಪ್ಪನ್ನವರ, ಎಸ್.ಎಸ್.ಪಾಟೀಲ, ಹನಮಂತ ದೇವರಮನಿ, ಆತ್ಮಾನಂದ ಜಾಲಿಹಾಳ, ಮಲ್ಲು ವಡಗೇರಿ, ರವಿ ಒಡ್ಡೊಡಗಿ, ಬಸವರಾಜ ಭೂತಾಳಿ, ರೇವಣಸಿದ್ದಪ್ಪ ನೋಟಗಾರ, ಮಂಜುನಾಥ ಹೊಸಮನಿ, ಬಿ.ಎಚ್.ಮೇಟಿ, ವೀರಣ್ಣ ಹಳೇಗೌಡರ, ರಾಧಾ ಆಕಳವಾಡಿ, ಶಿವು ಹನಮಕ್ಕನ್ನವರ ಸೇರಿದಂತೆ ಇತರರು ಇದ್ದರು. ಕುರುಬರ ಸಂಘದ ಜಿಲ್ಲಾಧ್ಯಕ್ಷ ಡಿ.ಬಿ.ಸಿದ್ದಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ವೈ.ಆರ್.ಭೂತಾಳಿ ನಿರೂಪಿಸಿದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts