More

    ಸ್ನೇಹಿತನ ಬರ್ತಡೇ ಆಚರಣೆ ಬೆನ್ನಲ್ಲೇ ಬರ್ಬರವಾಗಿ ಕೊಲೆಯಾದ ಯುವಕ

    ಬಾಗಲಕೋಟೆ: ಟಂಟಂ ಚಾಲಕನೊಬ್ಬನನ್ನು ಮಾರಕಾಸ್ತ್ರಗಳಿಂದ ತಲೆ, ಕುತ್ತಿಗೆ ಹಾಗೂ ಬೆನ್ನಿನ ಭಾಗದಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ತಾಲೂಕಿನ ನೀರಲಕೇರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಇದನ್ನೂ ಓದಿ: ಚನ್ನರಾಯಪಟ್ಟಣ ಎಸ್​ಐ ಆತ್ಮಹತ್ಯೆ ಪ್ರಕರಣ: ಸ್ಟೋಟಕ ಹೇಳಿಕೆ ನೀಡಿದ ಮಾಜಿ ಸಚಿವ ಎಚ್​.ಡಿ. ರೇವಣ್ಣ

    ರಂಗಪ್ಪ ಚಂದ್ರಶೇಖರ ದಳವಾಯಿ(22) ಕೊಲೆಯಾದ ಟಂಟಂ ಚಾಲಕ. ಮೊನ್ನೆ (ಗುರುವಾರ) ರಾತ್ರಿ ಕೊಲೆ ನಡೆದಿದ್ದು, ಸದ್ಯ ಗ್ರಾಮದ ಹೊರವಲಯದ ಮೃತದೇಹ ‌ಕಂಡುಬಂದಿದೆ.

    ಮೊನ್ನೆ ರಾತ್ರಿ ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಸ್ನೇಹಿತ ಕೃಷ್ಣ ಗೌಡರರ್​ ಎಂಬಾತನ ಹುಟ್ಟುಹಬ್ಬ ಆಚರಿಸಿದ್ದರು. ಬಳಿಕ ಮನೆಗೆ ಹೋಗೋದಾಗಿ ಸ್ನೇಹಿತರ ಬಳಿ ಹೇಳಿದ್ದ. ಆದರೆ, ಕೆಲವೇ ಕ್ಷಣಗಳಲ್ಲಿ ಚಾಲಕನ ಕೊಲೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

    ಇದನ್ನೂ ಓದಿ: ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ನಿಷೇಧ: ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲು

    ಕೊಲೆ ಮಾಡಿದವರು ಯಾರು ಎಂಬುದರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಸ್ನೇಹಿತರು ಹಾಗೂ ಕುಟುಂಬಸ್ಥರ ವಿಚಾರಣೆ ನಡೆದಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಇನ್ಮುಂದೆ ಸರ್ಕಾರಿ ನೌಕರರು ಟಿ-ಶರ್ಟ್ಸ್​, ಜೀನ್ಸ್​ ಪ್ಯಾಂಟ್​ ಧರಿಸುವಂತಿಲ್ಲ: ಕಾರಣ ಹೀಗಿದೆ ನೋಡಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts