ಬಾಗಲಕೋಟೆ ಜಿಲ್ಲೆಗೆ ಬೆಳ್ಳಿ ಸಂಭ್ರಮ – 48 ಪುಟಗಳ ವಿಶೇಷ ಪುರವಣಿ ಬಿಡುಗಡೆ

blank

ಬಾಗಲಕೋಟೆ: ಅಖಂಡ ವಿಜಯಪುರದಿಂದ ಬಾಗಲಕೋಟೆ ಜಿಲ್ಲೆಯಾಗಿ ಪರಿವರ್ತನೆಗೊಂಡು 25 ವರ್ಷಗಳು ಪೂರ್ಣಗೊಂಡ ಹಿನ್ನೆಲೆ ವಿಜಯವಾಣಿ-ದಿಗ್ವಿಜಯ ಸುದ್ದಿ ಮಾಧ್ಯಮ ಹಾಗೂ ಕನ್ನಡ ಸಾಹಿತ್ಯ ಪರಿಷತ್, ಬಾಗಲಕೋಟೆ ಸಹಯೋಗದಲ್ಲಿ ‘ಬಾಗಲಕೋಟೆ ಜಿಲ್ಲೆಗೆ ಬೆಳ್ಳಿ ಸಂಭ್ರಮ’ ಕಾರ್ಯಕ್ರಮವನ್ನು ಸೆ. 22ರಂದು (ಗುರುವಾರ) ಬೆಳಗ್ಗೆ 10-30 ಗಂಟೆಗೆ ನವನಗರದ ಕಲಾ ಭವನದ ಆವರಣದಲ್ಲಿರುವ ಕಸಾಪ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

‘ಬಾಗಲಕೋಟೆ ಅಂದು-ಇಂದು’ ವಿಷಯವಾಗಿ ಆಹ್ವಾನಿತ ಗಣ್ಯರು ಮಾತನಾಡಲಿದ್ದಾರೆ. ಜೊತೆಗೆ ವಿಜಯವಾಣಿ ಹೊರತಂದಿರುವ ಬಾಗಲಕೋಟೆಃ25 ವಿಶೇಷ ಪುರವಣಿಯನ್ನು ಸಾಂಕೇತಿಕವಾಗಿ ಬಿಡುಗಡೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ, ಸಿಇಒ ಟಿ. ಭೂಬಾಲನ್, ಎಸ್ಪಿ ಜಯಪ್ರಕಾಶ ಹಕ್ಕರಕಿ, ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಉದ್ಯಮಿ ಸಂಗಮೇಶ ನಿರಾಣಿ, ಹಿರಿಯ ಪತ್ರಕರ್ತರಾದ ರಾಮ ಮನಗೂಳಿ, ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ, ವಿಜಯವಾಣಿ-ದಿಗ್ವಿಜಯ ಸ್ಥಾನಿಕ ಸಂಪಾದಕ ಕೆ.ಎನ್. ರಮೇಶ, ಇತರೆ ಗಣ್ಯರು ಆಗಮಿಸಲಿದ್ದಾರೆ.

Share This Article

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe

ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್​ಫಾಸ್ಟ್​…

ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips

ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…

ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್​​; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…