ಬಾಗಲಕೋಟೆ: ನಿವೃತ್ತ ಕೃಷಿ ಅಧಿಕಾರಿ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿ ಎಚ್.ಬಿ.ಗೊರವರ ತಮ್ಮ ಜನುಮ ದಿನದ ಅಂಗವಾಗಿ ನಗರದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ ವಿತರಣೆ ಮಾಡಿದರು.
ಅಲ್ಲದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ 5000 ರೂ. ನಗದು ನೀಡಿ ಪ್ರೋತ್ಸಾಹಿಡಿಸಿದರು. ಕಾಳಿದಾಸ ಶಿಕ್ಷಣ ಸಂಸ್ಥೆಯ ಚೇರಮನ್ ಎಸ್.ಎಸ್.ಪಾಟೀಲ, ಹೇಮ-ವೇಮ ಸಂಸ್ಥೆಯ ಅಧ್ಯಕ್ಷ ಡಾ.ಜಿ.ಆರ್. ಹಲಗಲಿ, ಆರ್.ಎಲ್.ಕಟಗೇರಿ, ಕಾಂಗ್ರೆಸ್ ಎಸ್.ಸಿ.ವಿಭಾಗದ ಜಿಲ್ಲಾಧ್ಯಕ್ಷ ರಾಜು ಮನ್ನಿಕೇರಿ ಇದ್ದರು.