ಮುಂಬೈ: ಮನಿ ಲಾಂಡರಿಂಗ್ ಕೇಸ್ನಲ್ಲಿ ಆರೋಪಿಯಾಗಿರುವ ಐಸಿಐಸಿಐ ಬ್ಯಾಂಕ್ನ ಮಾಜಿ ಸಿಇಒ ಚಂದಾ ಕೊಚ್ಚರ್ಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ. 5 ಲಕ್ಷ ರೂಪಾಯಿ ಬಾಂಡ್ನ ಆಧಾರದ ಮೇಲೆ ಈ ಜಾಮೀನು ನೀಡಲಾಗಿದ್ದು, ಅನುಮತಿ ಇಲ್ಲದೆ ದೇಶದಿಂದ ಹೊರಹೋಗಬಾರದೆಂದು ನ್ಯಾಯಾಲಯ ಸೂಚಿಸಿದೆ.
ಐಸಿಐಸಿಐ ಬ್ಯಾಂಕಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮಯದಲ್ಲಿ ವೀಡಿಯೋಕಾನ್ ಮತ್ತು ಇತರ ಎರಡು ಕಂಪನಿಗಳಿಗೆ ನೀಡಲಾದ 1,875 ಕೋಟಿ ರೂಪಾಯಿ ಸಾಲಗಳ ಮಂಜೂರಾತಿಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರ ನಡೆಸಿರುವ ಆರೋಪವನ್ನು ಕೊಚ್ಚರ್ ಎದುರಿಸುತ್ತಿದ್ದಾರೆ. ಈ ಸಂಬಂಧವಾಗಿ ಚಂದಾ ಕೊಚ್ಚರ್, ಆಕೆಯ ಪತಿ ದೀಪಕ್ ಕೊಚ್ಚರ್ ಮತ್ತು ವೀಡಿಯೋಕಾನ್ ಗ್ರೂಪ್ನ ವೇಣುಗೋಪಾಲ್ ಧೂತ್ ವಿರುದ್ಧ ಎನ್ಫೋರ್ಸ್ಮೆಂಟ್ ಡೈರೆಕ್ಟೊರೇಟ್(ಇಡಿ) 2019ರ ಫೆಬ್ರವರಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.
ಇದನ್ನೂ ಓದಿ: ಎಲ್ಗಾರ್ ಪರಿಷದ್ ಪ್ರಕರಣದ ಆರೋಪಿ ಗೌತಮ್ ನವಲಖಗೆ ಜಾಮೀನು ಇಲ್ಲ
ಜೂನ್ 2009 ರಿಂದ ಅಕ್ಟೋಬರ್ 2011 ರ ನಡುವೆ ಬ್ಯಾಂಕ್ ನೀಡಿದ ಆರು ಸಾಲಗಳಲ್ಲಿ ಅಕ್ರಮ ನಡೆದಿದೆ ಎಂಬ ಸಿಬಿಐ ವರದಿಯ ಮೇಲೆ ಇಡಿ ತನಿಖೆ ನಡೆಸುತ್ತಿದೆ. ಚಂದಾ ಕೊಚ್ಚರ್ ತಮ್ಮ ಕಾರ್ಯಾವಧಿಯಲ್ಲಿ ಗುಜರಾತಿನ ಸ್ಟರ್ಲಿಂಗ್ ಬಯೋಟೆಕ್ ಕಂಪೆನಿಗೆ ಮತ್ತು ಭೂಷನ್ ಸ್ಟೀಲ್ ಗ್ರೂಪ್ಗೆ ನೀಡಿರುವ ಇನ್ನೆರಡು ಸಾಲಗಳ ಬಗ್ಗೆಯೂ ಇಡಿ ತನಿಖೆ ನಡೆಸುತ್ತಿದೆ.(ಏಜೆನ್ಸೀಸ್)
ಸುಳ್ಳು ಸುದ್ದಿ, ದ್ವೇಷ ಹರಡುವ ಟ್ವೀಟ್ಗಳು : ಟ್ವಿಟರ್ ಮತ್ತು ಸರ್ಕಾರಕ್ಕೆ ಸುಪ್ರೀಂ ನೋಟೀಸು
ಬಂಧನ ವಾರಂಟ್ ಜಾರಿಯಾಗುತ್ತಿದ್ದಂತೆ ಕೋರ್ಟ್ಗೆ ದೌಡಾಯಿಸಿದ ನಟಿ ಪದ್ಮಜಾ ರಾವ್