ಮಂಗಳೂರು: ಭಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ಆದೇಶ ಹಿನ್ನಲೆ ಪೊಲೀಸರ ಕ್ರಮದ ವಿರುದ್ಧ ಹಿಂದೂ ಪರ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪೆಡಿಸುತ್ತಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿರುವ ಭಜರಂಗದಳದ ಮುಖಂಡ ಪುನೀತ್ ಅತ್ತಾವರ ನಾವು ಇಷ್ಟು ದಿನ ಪೊಲೀಸರಿಗೆ ಗೋವುಗಳ ಕಳ್ಳಸಾಗಾಣೆ ಬಗ್ಗೆ ಮಾಹಿತಿ ನೀಡಿ ನಡೆಯುತ್ತಿದ್ದೆವು. ಇನ್ನು ಮುಂದೆ ಹಾಗೆ ಮಾಡುವುದಿಲ್ಲ ನಾವೇ ನೇರವಾಗಿ ಹೋಗುತ್ತೇವೆ.
ಇದನ್ನೂ ಓದಿ: ಭಜರಂಗದಳ ಕಾರ್ಯಕರ್ತರ ಗಡಿಪಾರಿಗೆ ಸಿದ್ಧತೆ? ಡಿಸಿಪಿ ಎದುರು ಹಾಜರಾಗಲು ಸೂಚನೆ
ಗೋವುಗಳ ಕಳ್ಳಸಾಗಾಣೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಗಡಿಪಾರಿನ ನೋಟಿಸ್ ನೀಡಿದ್ದಾರೆ. ಕಣ್ಣೆದುರೇ ಅಕ್ರಮಗಳು ನಡೆದಾಗ ಸುಮ್ಮನೇ ಇರಬೇಕಾ. ಗೋ ಹತ್ಯೆ ನಿಷೇಧದ ಬಗ್ಗೆ ಸರ್ಕಾರದ ಆದೇಶವೇ ಇದೆ. ಪೊಲೀಸರಿಗೆ ಮಾಹಿತಿ ನೀಡಿಯೇ ಗೋಹತ್ಯೆ ತಡೆದರೆ ನಮ್ಮ ಮೇಲೆಯೇ ಪ್ರಕರಣ ದಾಖಲಿಸಿದ್ದಾರೆ.
ಹೋಳಿ ಆಚರಣೆ ನೆಪದಲ್ಲಿ ಮದ್ಯ ಹಾಗೂ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದರು ಅದನ್ನು ಸಹ ಪೊಲೀಸರಿಗೆ ಮಾಹಿತಿ ನೀಡಿ ತಡೆದಿದ್ದೇವೆ. ಕಾಂಗ್ರೆಸ್ ಸರ್ಕಾರ ತುಷ್ಠೀಕರಣದ ರಾಜಕೀಯ ಮಾಡುತ್ತಿದೆ. ಮೊದಲು ಭಜರಂಗದಳ ಬ್ಯಾನ್ ಮಾಡುವುದಾಗಿ ಹೇಳಿದರು ಈಗ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮುಖಂಡ ಪುನೀತ್ ಅತ್ತಾವರ ಕಿಡಿಕಾರಿದ್ದಾರೆ.