ಬೇಕರಿ, ಕಾಂಡಿಮೆಂಟ್ಸ್ ಮತ್ತು ಬೀಡ ಅಂಗಡಿ ಹಾಗೂ ಶ್ರಮಿಕರ ಮೇಲೆ ದೌರ್ಜನ್ಯ; ತಪ್ಪಿತಸ್ಥರ ಮೇಲೆ ಕಠಿಣ ಕ್ರಮ: Minister ದಿನೇಶ್ ಗುಂಡೂರಾವ್

blank

ಬೆಂಗಳೂರು: ದುಡಿದು ತಿನ್ನುವ ಬೇಕರಿ ಕಾಂಡಿಮೆಂಟ್ಸ್ ಮತ್ತು ಬೀಡ ಅಂಗಡಿ ಹಾಗೂ ಸಣ್ಣ ಉದ್ಯಮೆದಾರರ ಮೇಲೆ ದೌರ್ಜನ್ಯ ನಡೆಯುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇದನ್ನೂ ಓದಿ: 23ರಂದು ಕಾಂಗ್ರೆಸ್ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ – ವಿಕಸಿತ ಭಾರತ ಸಂಕಲ್ಪ ಸಭೆ ಉದ್ಘಾಟಿಸಿ ಸತೀಶ್ ಕುಂಪಲ ಮಾಹಿತಿ

ವಸಂತನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ರವಿ ಶೆಟ್ಟಿ ಬೈಂದೂರ್ ಸಾರಥ್ಯದಲ್ಲಿ ನಡೆದ “ಶ್ರಮಿಕರ ಸಂವಾದ ಸಭೆ”ಯಲ್ಲಿ ಕಿಕ್ಕಿರಿದು ತುಂಬಿದ್ದ ಸಂತ್ರಸ್ತರ ಜೊತೆ ಸಂವಾದ ನಡೆಸಿ ಮಾತನಾಡಿದ ಅವರು, ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ. ಬೇಕರಿ ಕಾಂಡಿಮೆಂಟ್ಸ್ ಮತ್ತು ಬೀಡ ಅಂಗಡಿ ಹಾಗೂ ಸಣ್ಣ ಉದ್ಯಮೆದಾರರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಖಂಡನೀಯ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸರ್ಕಾರ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಬಿಬಿಎಂಪಿ, ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳ ಸಭೆ ಕರೆದು ಕಾಂಡಿಮೆಂಟ್ಸ್, ಬೀಡ ಅಂಗಡಿ ಹಾಗೂ ಸಣ್ಣ ಉದ್ಯಮೆದಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಈ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸುತ್ತೇವೆ ಎಂದರು.

ಬೇಕರಿ, ಕಾಂಡಿಮೆಂಟ್ಸ್ ಮತ್ತು ಬೀಡ ಅಂಗಡಿ ಹಾಗೂ ಶ್ರಮಿಕರ ಮೇಲೆ ದೌರ್ಜನ್ಯ; ತಪ್ಪಿತಸ್ಥರ ಮೇಲೆ ಕಠಿಣ ಕ್ರಮ: Minister ದಿನೇಶ್ ಗುಂಡೂರಾವ್

ಇದನ್ನೂ ಓದಿ:ರಾತ್ರಿ 9 ಗಂಟೆ ಮೇಲೆ ಊಟ ಮಾಡೋದ್ರಿಂದ ಅನಾನುಕೂಲಗಳೇ ಅಧಿಕ: ಊಟಕ್ಕೆ ಸರಿಯಾದ ಸಮಯ ಯಾವುದು? | Eating

ಇದಕ್ಕೂ ಮುನ್ನ ಸಂವಾದದಲ್ಲಿ ಸಂತ್ರಸ್ತರು ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ಎಳೆಎಳೆಯಾಗಿ ಬಿಡಿಸಿಟ್ಟರು. ಬಿಬಿಎಂಪಿ ಅಧಿಕಾರಿಗಳು ಬೇಕರಿಗಳ ಮೇಲೆ ದಾಳಿ ಮಾಡಿ ಗರಿಷ್ಠ 25 ಸಾವಿರ ರೂ ವರೆಗೆ ದಂಡ ವಿಧಿಸುತ್ತಿದ್ದಾರೆ. ಮರಿ. ಪುಢಾರಿ ರೌಡಿಗಳ ಉಪಟಳವೂ ಹೆಚ್ಚಾಗಿದೆ. ಪರಿಸರ ಮಾಲೀನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನಮ್ಮ ಮೇಲೆ ದರ್ಪ, ದೌರ್ಜನ್ಯ ತೋರುತ್ತಿದ್ದಾರೆ. ಸರ್ಕಾರ ನಮಗೆ ರಕ್ಷಣೆ ನೀಡದಿದ್ದರೆ ನಾವು ದಂಗೆ ಏಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರುಮೆ ಮಾತನಾಡಿ, ನಾನೂ ಕೂಡ ಹೋಟೆಲ್ ಉದ್ಯಮದಲ್ಲಿ ತೊಡಗಿಕೊಂಡು ಬೆಳೆದು ಬಂದವನು. ನನಗೆ ಈ ಉದ್ಯಮದಲ್ಲಿ 30 ವರ್ಷಗಳ ಕಹಿ ಅನುಭವವಿದೆ. ಬೇಕರಿ, ಹೋಟೆಲ್ ಗಳು, ಬೀಡಾ ಅಂಗಡಿಗಳನ್ನು ಹೆಚ್ಚಾಗಿ ಕರಾವಳಿ ಭಾಗದವರು ನಡೆಸುತ್ತಿದ್ದಾರೆ. ಈ ಸಮಸ್ಯೆ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶದನಲ್ಲಿ ಪ್ರಸ್ತಾಪಿಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುತ್ತೇನೆ ಎಂದು ಹೇಳಿದರು.

ಶ್ರಮಿಕರ ನೇರ ಸಂವಾದ” ಕಾರ್ಯಕ್ರಮದಲ್ಲಿ ಸಂತೋಷ ಗುರೂಜಿ, ಹಿರಿಯ ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ, ಸಮತಾ ಸೈನಿಕದಳ ವೆಂಕಟಸ್ವಾಮಿ ಏನ್, ಆರ್ ರಮೇಶ್, ಚಾಲಕರ ಸಂಘಟನೆಯಿಂದ ಗಂಡಸಿ ಸದಾನಂದ ಸ್ವಾಮಿ, ಬೆಂಗಳೂರು ಹೋಟೆಲ್ ಸಂಘದ ಗೌ, ಅಧ್ಯಕ್ಷರು ಪಿ ಸಿ ರಾವ್, ಮಧುಕರ್ ಶೆಟ್ಟಿ, ಕನ್ನಡ ಪರ ಹೋರಾಟಗಾರಾದ, ನಟರಾಜ್ ಬೊಮ್ಮಸಂದ್ರ ಮಂಚೇಗೌಡ, ಪೂಜಾಶೆಟ್ಟಿ, ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಒಂದರ ಮೇಲೊಂದರಂತೆ 7 ವಿಮಾನ ರದ್ದು; 3 ವರ್ಷದಲ್ಲಿ ರದ್ದಾದ ಏರ್​​ ಇಂಡಿಯಾ ವಿಮಾನಗಳೇಷ್ಟು? | Flights Cancelled

ದೆಹಲಿಯಲ್ಲಿ ಭಾರೀ ಮಳೆ; ನೀರು ತುಂಬಿದ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತ: 12 ವಿಮಾನಗಳ ಮಾರ್ಗ ಬದಲಾವಣೆ! | Heavy Rains

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…