More

    ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಜನ್ಮ ದಿನ ಆಚರಣೆ

    ಮೈಸೂರು : ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಜನ್ಮ ದಿನದ ಪ್ರಯುಕ್ತ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಸಹಕಾರ ಸಂಘ ಹಾಗೂ ಅಖಿಲ ಕರ್ನಾಟಕ ಒಕ್ಕಲಿಗರ ಮಹಾಸಭಾದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನೆರವೇರಿತು.


    ವಿನಾಯಕನಗರದ ಶ್ರೀ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 120ಕ್ಕೂ ಹೆಚ್ಚ ಸಾರ್ವಜನಿಕರು ಬಿ.ಪಿ., ಶುಗರ್, ಕಣ್ಣು ತಪಾಸಣೆ ಮಾಡಿಸಿದರು. ಜತೆಗೆ ಡೆಂಟಲ್ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳ ತಪಾಸಣೆಗೂ ಒಳಗಾದರು.


    ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸಿ.ಜಿ.ಗಂಗಾಧರ್ ಮಾತನಾಡಿ, ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಎಲ್ಲ ಜನಾಂಗದವರ ಏಳಿಗೆ ಶ್ರಮಿಸಿದರು. ಆಕಾಶಕ್ಕೆ ಆಕಾಶವೇ ಸರಿಸಮಾನ. ಅಂತೆಯೇ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸಾಧನೆಯ ಹಾದಿ ಬಲು ದೊಡ್ಡದು. ಚುಂಚನಗಿರಿಯನ್ನು ಚಿನ್ನದಗಿರಿ ಎಂಬಂತೆ ಮರು ಸೃಷ್ಟಿಸಿದ್ದಾರೆ. ಶ್ರೀಗಳು ಧಾರ್ಮಿಕ ದೃಷ್ಟಿಯಲ್ಲಿ ಜಗದ್ಗುರುಗಳು ಎನಿಸಿಕೊಂಡಿದ್ದರು. ಅವರು ಸೇವೆಯೇ ಪೂಜೆ ಎಂದು ಭಾವಿಸಿದ ಜನಮುಖ ಚಿಂತಕರಾಗಿದ್ದರು. ಶೋಷಿತರು, ದಲಿತರು, ಅನಕ್ಷರಸ್ಥರು, ರೈತರು, ನಿರ್ಲಕ್ಷಿತರ ಬಗ್ಗೆ ಸ್ಪಂದಿಸುವ ಹಂಬಲವುಳ್ಳವರಾಗಿದ್ದರು ಎಂದರು.


    ಕಾರ್ಯಕ್ರಮಕ್ಕೆ ಮಾಜಿ ಶಾಸಕ ವಾಸು ಚಾಲನೆ ನೀಡಿದರು. ಇದೇ ವೇಳೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.


    ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಕಾಂಗ್ರೆಸ್ ಮುಖಂಡ ಹರೀಶ್ ಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಎಂ.ಬಿ.ಮಂಜೇಗೌಡ, ಅಖಿಲ ಕರ್ನಾಟಕ ಒಕ್ಕಲಿಗರ ಮಹಾಸಭಾದ ಅಧ್ಯಕ್ಷ ಎನ್.ಬೆಟ್ಟೇಗೌಡ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ದಂತ ವೈದ್ಯ ಡಾ.ಲೋಕೇಶ್, ಮುಖಂಡರಾದ ಹರೀಶ್‌ಗೌಡ ದೇವರಾಜ ಮೊಹಲ್ಲಾ, ಎಂ.ಮಹದೇವಸ್ವಾಮಿ, ಎಂ.ಭೈರಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts