ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಮನು ಬಳಿಗಾರ್ ಹಾಗೂ ಅವರ ಸಹೋದರ ಎಸ್.ಪಿ. ಬಳಿಗಾರ್ ಅವರು ಕರ್ನಾಟಕ ಲೇಖಕಿಯರ ಸಂಘದಲ್ಲಿ ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ದತ್ತಿ ಪ್ರಶಸ್ತಿ’ ಸ್ಥಾಪಿಸಿದ್ದಾರೆ.
ಈ ದತ್ತಿಯಿಂದ ಪ್ರತಿ ವರ್ಷ ಮೂರು ಪ್ರಶಸ್ತಿಗಳನ್ನು ನೀಡಲು ಅವರು ನಿರ್ಧರಿಸಿದ್ದಾರೆ. ಈ ಸಂಬಂಧ 5,00,200 ದತ್ತಿ ಮೊತ್ತ ಇರಿಸಿದ್ದಾರೆ. ಗದ್ಯ ಸಾಹಿತ್ಯ, ಕಾವ್ಯ ಪ್ರಕಾರ ಹಾಗೂ ಸಮಾಜ ಸೇವೆ ಕ್ಷೇತ್ರದಲ್ಲಿ ಪ್ರಶಸ್ತಿ ಸ್ಥಾಪಿಸಲು ನಿರ್ಧರಿಸಲಾಗಿದೆ.
50 ವರ್ಷ ಮೇಲ್ಪಟ್ಟ ಸಾಧಕರನ್ನು ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಪ್ರಶಸ್ತಿಯು ತಲಾ 10 ಸಾವಿರ ನಗದು ಒಳಗೊಂಡಿರಲಿದೆ ಎಂದು ತಿಳಿಸಿದ್ದಾರೆ.