ಉತ್ತರಕನ್ನಡ: ಹಿಜಾಬ್ ವಿವಾದ ಕುರಿತಂತೆ ಹೈಕೋರ್ಟ್ ಇಂದು ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ಭಟ್ಕಳದ ಕೆಲವು ವರ್ತಕರು ಇವತ್ತು ಸ್ವಯಂಪ್ರೇರಿತರಾಗಿ ಬಂದ್ ನಡೆಸಿದ್ದು, ನಾಳೆಯೂ ಬಂದ್ ಮಾಡುವಂತೆ ಸಂಘಟನೆಯೊಂದು ಕರೆ ನೀಡಿದೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ಕೋರಿದ್ದನ್ನು ನಿರಾಕರಿಸಿದ್ದ ಹೈಕೋರ್ಟ್, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಸರ್ಕಾರ ನೀಡಿದ್ದ ಆದೇಶವನ್ನೇ ಎತ್ತಿಹಿಡಿದು ತೀರ್ಪು ನೀಡಿತ್ತು. ಆದರೆ ಈ ಬಗ್ಗೆ ಭಟ್ಕಳದಲ್ಲಿ ಇಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಹಿಜಾಬ್ ಕುರಿತ ಹೈಕೋರ್ಟ್ ತೀರ್ಪು ಬೆನ್ನಿಗೇ ಭಟ್ಕಳದಲ್ಲಿ ಬಂದ್!
ಮಾತ್ರವಲ್ಲ, ಮುಸ್ಲಿಂ ಸಮುದಾಯದ ಕೆಲವು ವರ್ತಕರು ಭಟ್ಕಳದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ತೀರ್ಪು ಕುರಿತಂತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಸಂದರ್ಭದಲ್ಲಿ ತಂಜೀಮ್ ಎಂಬ ಸಂಘಟನೆಯೊಂದರ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದವರ ಸಭೆ ಕೂಡ ನಡೆದಿತ್ತು.
ಇದನ್ನೂ ಓದಿ: 52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್; ಸಂತಸಪಟ್ಟ ಮಗನ ಸಂದೇಶವಿದು..
ಹೈಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ನಾಳೆಯೂ ಭಟ್ಕಳದಲ್ಲಿ ಸ್ವಯಂಪ್ರೇರಿತರಾಗಿ ಬಂದ್ ನಡೆಸಬೇಕು ಎಂದು ತಂಜೀಮ್ ಸಂಘಟನೆ ಮುಸ್ಲಿಂ ಸಮುದಾಯದ ವರ್ತಕರಿಗೆ ಕರೆ ನೀಡಿದೆ. ತಂಜೀಮ್ ಕಾರ್ಯನಿರ್ವಾಹಕ ಮಂಡಳಿ ಸಭೆ ಬಳಿಕ ಮುಸ್ಲಿಂ ಸಮುದಾಯದ ವಿವಿಧ ಸಂಸ್ಥೆಗಳ ಬಂದ್ಗೂ ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗಂಡನ ಕತ್ತನ್ನು ಕತ್ತರಿಸಿದ ಹೆಂಡತಿ; ರುಂಡ ಚೀಲದಲ್ಲಿರಿಸಿ ದೇವಸ್ಥಾನದಲ್ಲಿಟ್ಟಳು!