ಚಾಮರಾಜನಗರ: ಸೂಪರ್ ಸ್ಟಾರ್ ರಜನಿಕಾಂತ್ ಅವರು ವನ್ಯಜೀವಿ ಕುರಿತ ಸಾಕ್ಷ್ಯ ಚಿತ್ರದಲ್ಲಿ ನಟಿಸಲು ಬಂಡೀಪುರ ಅರಣ್ಯಕ್ಕೆ ಆಗಮಿಸಿದ್ದಾರೆ.
ಬೆನಿಜಾಯ್ ಏಷ್ಯಾ ಗ್ರೂಪ್ ನ ಸೆವೆನ್ ಟಾರಸ್ ಸ್ಟುಡಿಯೋ ಚಮನಹಳ್ಳಿಯಲ್ಲಿ ಈ ಸಾಕ್ಷ್ಯ ತಯಾರಿಸುತ್ತಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿತ್ರೀಕರಣಕ್ಕೆ ಅರಣ್ಯ ಇಲಾಖೆ ಜೊತೆ ಸಂಸ್ಥೆ ಒಡಂಬಡಿಕೆ ಮಾಡಿಕೊಂಡಿದೆ.
ಜ.27ರಂದು ಅರ್ಧ ದಿನ ಹಾಗೂ ಜ 28 ಬೆ.10 ರಿಂದ ಸಂಜೆ 6 ಗಂಟೆವರೆಗೆ. ಜ 29 ರಂದು ಅರ್ಧ ದಿನ ಚಿತ್ರೀಕರಣಕ್ಕೆ ಅರಣ್ಯ ಇಲಾಖೆ ಅನುಮತಿ ನೀಡಿದೆ.
ಶಬ್ದ ಹಾಗೂ ವಾಯು ಮಾಲಿನ್ಯವಾಗದಂತೆ ಚಿತ್ರೀಕರಣ ನಡೆಸಲು ಅರಣ್ಯ ಇಲಾಖೆ ಷರತ್ತು ವಿಧಿಸಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಮಕ್ಷಮದಲ್ಲಿ ಚಿತ್ರೀಕರಣ ನಡೆಯುತ್ತಿದೆ.
ಬೇರ್ ಗ್ರೀಲ್ಸ್ ಆಗಮನ: ಜನವರಿ 28ರಂದು ನಡೆಯುವ ಚಿತ್ರೀಕರಣಕ್ಕೆ ಮ್ಯನ್ ವರ್ಸಸ್ ವೈಲ್ಡ್ ಕಾರ್ಯಕ್ರಮ ನಡೆಸಿಕೊಡುವ ವನ್ಯ ಜೀವಿ ಸಾಹಸಿ ನಿರ್ದೇಶಕ ಬೇರ್ ಗ್ರೀಲ್ಸ್ ಆಗಮಿಸಲಿದ್ದಾರೆ.
ಗುಂಡ್ಲುಪೇಟೆ ಹೆಲಿಪ್ಯಾಡ್ಗೆ ಹೆಲಿಕಾಪ್ಟರ್ ಮೂಲಕ ಬಂದು ಇಳಿಯುವ ಅವರು ಅಲ್ಲಿಂದ ವಾಹನದಲ್ಲಿ ಅರಣ್ಯಕ್ಕೆ ತೆರಳಲಿದ್ದಾರೆ. ಇಂದು ಮಧ್ಯಾಹ್ನ ಬಾಲಿವುಡ್ ನಟ ಅಕ್ಷಯ್ ಕುಮಾರ್ ಆಗಮಿಸಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. (ದಿಗ್ವಿಜಯ ನ್ಯೂಸ್)