More

    ರೈಲು ಪ್ರಯಾಣಿಕರಿಗೆ ಗುಡ್​ ನ್ಯೂಸ್; ಬೆಂಗಳೂರು-ಧಾರವಾಡ ಮಾರ್ಗದ ವಿದ್ಯುದ್ದೀಕರಣ ಪೂರ್ಣ

    ನವದೆಹಲಿ: ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್​ ನ್ಯೂಸ್​ ಒಂದನ್ನು ನೀಡಿದ್ದು, ಧಾರವಾದ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಸಿದ್ದಗಂಗಾ ಎಕ್ಸ್​ಪ್ರೆಸ್​ ರೈಲಿನ ವಿದ್ಯುದೀಕರಣ ಪೂರ್ಣಗೊಳಿಸಿರುವುದಾಗಿ ತಿಳಿಸಿದೆ.

    ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಕೇಂದ್ರ ಸಚಿವ ಪಿಯೂಷ್​ ಗೋಯೆಲ್ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್​​ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

    ಧಾರವಾಡ ಹಾಗೂ ಬೆಂಗಳೂರು ಪ್ರಯಾಣಿಕರಿಗೆ ಒಂದು ಸಿಹಿ ಸುದ್ದಿ . ಸಿದ್ದಗಂಗಾ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಡೀಸೆಲ್​ ಇಂಜಿನ್​ ರೈಲು ಈಗ ವಿದ್ಯುತ್ ರೈಲಾಗಿ ಪರಿವರ್ತಿಸಲಾಗಿದೆ. ಬೆಂಗಳೂರು-ಧಾರವಾಡ ನಡುವಿನ ಮೊದಲ ಎಲೆಕ್ಟ್ರಿಕ್​ ರೈಲು ಇದಾಗಿದ್ದು, ಇದನ್ನು ಸಾಧ್ಯವಾಗಿಸಿದ ಪ್ಋಧಾನಿ ನರೇಂದ್ರ ಮೋದಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್​ ಮತ್ತು ಎಲ್ಲಾ ಅಧಿಕಾರಿಗಳಿಗೆ ಧನ್ಯವಾದಗಳು ಎಂದು ಟ್ವೀಟ್​ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts