ರಾಣೆಬೆನ್ನೂರ: ರಾಜ್ಯ ಸರ್ಕಾರ ಒಳ ಮೀಸಲಾತಿಯ ಕುರಿತು ಅ. 28ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲು ತಯಾರಿ ನಡೆಸುತ್ತಿರುವುದನ್ನು ವಿರೋಧಿಸಿ ಬಂಜಾರ ಸಮುದಾಯದ ರಾಷ್ಟ್ರೀಯ ಗೋರ್ ಸೇನಾ ಸಂಘಟನೆ ರಾಜ್ಯ ಘಟಕದ ಸದಸ್ಯರು ಶುಕ್ರವಾರ ನಗರದಲ್ಲಿ ಸ್ಥಳಿಯ ಶಾಸಕರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಜ್ಯ ಬಂಜಾರ ಸಮಾಜಕ್ಕೆ ಕಾಡುತ್ತಿರುವ ಒಳಮೀಸಲಾತಿ ಮತ್ತು ವರ್ಗೀಕರಣವನ್ನು ರಾಷ್ಟ್ರೀಯ ಗೋರ್ ಸೇನಾ ಸಂಘಟನೆ ರಾಜ್ಯ ಘಟಕ ತೀವ್ರವಾಗಿ ವಿರೋಧಿಸುತ್ತದೆ. ಈ ವಿಚಾರವಾಗಿ ರಾಜ್ಯ ಸರ್ಕಾರವು ಒಳಮೀಸಲಾತಿ ಕುರಿತು ಅ. 28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲು ತಯಾರಿ ನಡೆಸುತ್ತಿರುವುದನ್ನು ಸಹ ಖಂಡಿಸುತ್ತದೆ.
ರಾಜ್ಯದ ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳನ್ನು ಒಂದು ಗುಂಪಿಗೆ ಸೇರಿಸಿ, ಈ ಸಮುದಾಯಗಳನ್ನು ಸಮಾಜದ ಮುಖ್ಯ ವಾಹಿನಿಯಿಂದ ಹೊರಗಿಡಬೇಕೆನ್ನುವ ಯತ್ನವು ಎಂದಿಗೂ ಸಹಿಸಲು ಸಾಧ್ಯವಿಲ್ಲ. ಅಂಬೇಡ್ಕರ್ ಅವರು ಸಂವಿಧಾನಾತ್ಮಕವಾಗಿ ನೀಡಿರುವ ಮೀಸಲಾತಿಯನ್ನು ಅಸಂವಿಧಾನಾತ್ಮಕ ಹಾಗೂ ಅವೈಜ್ಞಾನಿಕವಾಗಿ ವರ್ಗೀಕರಣವನ್ನು ಸರ್ಕಾರ ಮಾಡಕೂಡದು.
ಮೀಸಲಾತಿಯ ವರ್ಗೀಕರಣ ರಾಜ್ಯದಲ್ಲಿರುವ ಎಲ್ಲ ಸಮುದಾಯಗಳ ಸರಿಯಾದ ಅಧ್ಯಯನ ಇಲ್ಲದೆ ಹಾಗೂ ವೈಜ್ಞಾನಿಕವಾಗಿ ಸರಿಯಾದ ದತ್ತಾಂಶ ಸಂಗ್ರಹಿಸಲಾರದೆ, ತರಾತುರಿಯಲ್ಲಿ ಮಾಡಿಕೊಡರು. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ದೊರಕಿರುವ ಅವಕಾಶಗಳು, ಆಥಿರ್ಕ ಸ್ಥಿತಿಗಳು, ರಾಜಕೀಯ ಸ್ಥಾನಮಾನ, ಹಾಗೂ ಸಾಮಾಜಿಕ ವ್ಯವಸ್ಥೆಯ ನಿಖರ ಅಂಕಿಅಂಶಗಳನ್ನು ಒಳಗೊಂಡ ದತ್ತಾಂಶವನ್ನು ಆಧರಿಸದೆ ಒಳಮೀಸಲು ಹಂಚಿಕೆಯ ನಿರ್ಧಾರ ಸಮಂಜಸವಾದ ನಡೆಯಲ್ಲ.
ಈ ಹಿಂದೆ ನಮ್ಮ ಸಮಾಜಕ್ಕೆ ಅನ್ಯಾಯ ಮಾಡಲು ಬಂದ ಬಿಜೆಪಿ ವಿರುದ್ಧ ಬಿಜೆಪಿ ಹಠಾವ್ ತಾಂಡಾ ಬಚಾವ್ ಎಂಬ ಘೋಷಣೆ ಮಾಡಲಾಗಿತ್ತು. ಇದು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಹಠಾವ್ ತಾಂಡಾ ಬಟಾವ್ ಎಂದು ಬದಲಾಗದಂತೆ ನಿಗಾವಹಿಸಲು ಎಚ್ಚರಿಸುತ್ತಿದ್ದೇವೆ ಎಂದು ಆಗ್ರಹಿಸಿದರು.
ಪ್ರಮುಖರಾದ ರಾಮಪ್ಪ ನಾಯಕ, ಸೋಮಪ್ಪ ಲಮಾಣಿ, ಬೀರಪ್ಪ ಲಮಾಣಿ, ದಾನಪ್ಪ ಪೂಜಾರ, ಹಾಲೇಶ ಲಮಾಣಿ, ಮಾಲತೇಶ ಲಮಾಣಿ, ಚಂದ್ರು ಲಮಾಣಿ, ಮಾರುತಿ ಲಮಾಣಿ, ಆನಂದ ಲಮಾಣಿ, ದೇವಲಪ್ಪ ಲಮಾಣಿ ಮತ್ತಿತರರು ಪಾಲ್ಗೊಂಡಿದ್ದರು.
ಬಂಜಾರ ಸಮಾಜದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ಕಣ್ಣಿಗೊಂದು ಸವಾಲ್…ಈ ಫೋಟೋದಲ್ಲಿರುವ ಹಾವನ್ನು ಗುರುತಿಸಬಲ್ಲಿರಾ? Optical Illusion..
Optical Illusion: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ…
Tea….ಒಂದು ತಿಂಗಳು ಟೀ ಕುಡಿಯುವುದನ್ನು ಬಿಟ್ಟರೆ ಏನಾಗುತ್ತೆ ಗೊತ್ತಾ?
Tea: ಬೆಳಗ್ಗೆ ಎದ್ದ ತಕ್ಷಣ ಬಿಸಿ ಬಿಸಿ ಟೀ ಕುಡಿದರೆ ಸಿಗುವ ಸಂತೋಷ ಅಷ್ಟಿಷ್ಟಲ್ಲ. ಹಾಗಿದ್ದರೂ,…
ಈ ಅಭ್ಯಾಸಗಳಿಂದ ನೀವು ಶ್ವಾಸಕೋಶ ಕ್ಯಾನ್ಸರ್ಗೆ ತುತ್ತಾಗಬಹುದು ಎಚ್ಚರ! ತಡೆಗಟ್ಟದ್ದಿದ್ರೆ ಸಾವು ಕಟ್ಟಿಟ್ಟಬುತ್ತಿ | Lung Cancer
Lung Cancer: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ವಯಸ್ಸಿನ…