ಬೆಂಗಳೂರು: ಬಾರ್ನಲ್ಲಿ ಈ ಎರಡು ತಂಡಗಳು ಮದ್ಯಪಾನ ಮಾಡುವಾಗ ಕಿರಿಕ್ ಆಗಿದ್ದು ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ಸಂದರ್ಭ ಕಿಡ್ನಾಪ್ ಸೇಡಿಗೆ ಸಿನಿಮಾ ಸ್ಟೈಲ್ ನಲ್ಲಿ ಚೇಸ್ ಮಾಡಿ ಹಲ್ಲೆ ಮಾಡಿದ ಘಟನೆ ಇದೇ ತಿಂಗಳ 9ರಂದು ನಡೆದಿದೆ.
ಈ ಪ್ರಕರಣದಲ್ಲಿ ರೌಡಿಶೀಟರ್ ಸಹಚರರು ಹಾಗೂ ಸಿದ್ದಾಪುರ ಯುವಕರ ನಡುವೆ ಗಲಾಟೆ ನಡೆದಿದೆ. ಮನೋಜ್ ಹಾಗೂ 17 ವರ್ಷದ ಬಾಲಕ ಬಾರ್ನಲ್ಲಿದ್ದಾಗ ಈ ಪ್ರಕರಣ ನಡೆದಿದೆ. ಅಲ್ಲೇ ಕುಡಿಯಲು ಬಂದಿದ್ದ ಸಿದ್ಧಾಪುರ ಯುವಕರ ಜತೆ ಗಲಾಟೆ ನಡೆದಿದೆ. ಗಲಾಟೆಯ ನಡುವೆ ಮನೋಜ್ ಹಾಗೂ ಬಾಲಕನನ್ನು ಕಿಡ್ನಾಪ್ ಮಾಡಿ ಸಿದ್ಧಾಪುರಕ್ಕೆ ಯುವಕರು ಕರೆದೊಯ್ದಿದ್ದರು.
ಸಿನಿಮೀಯ ಶೈಲಿಯಲ್ಲಿ ದಾಳಿ!
ಈ ವಿಚಾರ ತಿಳಿದ ರೌಡಿಶೀಟರ್ ಹ್ಯಾಂಡ್ರೋ ಹರೀಶ್, ತನ್ನ 15 ಸಹಚರರ ಜೊತೆ ಬೈಕ್ ನಲ್ಲಿ ಬಂದು ಅಟ್ಯಾಕ್ ಮಾಡಿ ಸಿದ್ದಾಪುರ ಯುವಕರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಸಿದ್ಧಾಪುರ ಯುವಕರು ಪೊಲೀಸರಿಗೆ ದೂರು ನೀಡಿದ್ದು ಈ ಸಂದರ್ಭ ಸಿದ್ದಾಪುರ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಲ್ಲೆಗೆ ಸಂಬಂಧಿಸಿದಂತೆ 6 ಜನ ಯುವಕರು, 4 ಮಂದಿ ಕಾನೂನು ಸಂಘರ್ಷಕ್ಕೊಳಗಾದವರನ್ನು ಬಂಧಿಸಲಾಗಿದೆ.