More

    ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ಕಂಡಕ್ಟರ್ ಹಣ ಕಳವು

    ಬಣಕಲ್: ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸೋಮವಾರ ರಾತ್ರಿ ನಿಲ್ದಾಣದ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ನಿರ್ವಾಹಕನ ಹಣ ಕದ್ದೊಯ್ದಿದ್ದಾರೆ.

    ಮಂಗಳವಾರ ಬೆಳಗ್ಗೆ 7.30ಕ್ಕೆ ಕೊಟ್ಟಿಗೆಹಾರದಿಂದ ಉಜಿರೆಗೆ ಸಾಗಬೇಕಿದ್ದ ಮಿನಿ ಬಸ್ ಅನ್ನು ಸೋಮವಾರ ರಾತ್ರಿ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಿಲುಗಡೆ ಮಾಡಿ ಚಾಲಕ ಸುಮಂತ್, ನಿರ್ವಾಹಕ ಶಿವಕುಮಾರ್ ನಿಲ್ದಾಣದ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದರು. ಮಧ್ಯ ರಾತ್ರಿ 2 ಗಂಟೆ ಸುಮಾರಿಗೆ ವಿಶ್ರಾಂತಿ ಕೊಠಡಿಗೆ ನುಗ್ಗಿದ ಮೂವರು ಕಳ್ಳರು ಮೊಬೈಲ್ ಹಾಗೂ ಹಣ ತೆಗೆದುಕೊಂಡು ಪರಾರಿಯಾಗಲು ಯತ್ನಿಸಿದ್ದು ಶಬ್ದ ಕೇಳಿ ಎಚ್ಚರವಾದ ನಿರ್ವಾಹಕ ಶಿವಕುಮಾರ್ ಕಳ್ಳರ ಬೆನ್ನಟ್ಟಿದ್ದರು. ಆದರೆ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ ಮೊಬೈಲ್ ಎಸೆದು ಹಣದೊಂದಿಗೆ ಪರಾರಿಯಾದರು. ಶಿವಕುಮಾರ್ ಅವರ ಕೈ ಮತ್ತು ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಹಿಂದೆಯೂ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಳ್ಳತನ ಪ್ರಕರಣಗಳು ನಡೆದಿದ್ದು ಮಹಿಳಾ ಪ್ರಯಾಣಿಕರೊಬ್ಬರು ಮಾಂಗಲ್ಯ ಸರವನ್ನು ರಾತ್ರಿ ಸಮಯದಲ್ಲಿ ಕಳ್ಳನೊಬ್ಬ ಕಿತ್ತುಕೊಂಡು ನಿಲ್ದಾಣದ ಕಾಂಪೌಂಡ್ ಹಾರಿ ಪರಾರಿಯಾಗಿದ್ದ. ಬಸ್ ನಿಲ್ದಾಣದ ಶೌಚಗೃಹ ಸಿಬ್ಬಂದಿಯ ಹಣವನ್ನೂ ದೋಚಿದ್ದರು.

    ಕಳ್ಳತನ ಪ್ರಕರಣಗಳು ಹೆಚ್ಚಿರುವುದರಿಂದ ಪೊಲೀಸರು ಈ ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts