More

    ಟ್ವೀಟ್​ ಮೂಲಕ ಮತ್ತೊಮ್ಮೆ ಗುಡುಗಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​..!

    ವಿಜಯಪುರ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪ್ರಸ್ತಾಪಿಸಿ ಸ್ವಪಕ್ಷೀಯರಿಂದಲೇ ತೀವ್ರ ಟೀಕೆಗೆ ಗುರಿಯಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಇದೀಗ ಟ್ವೀಟ್​ ಮೂಲಕ ಮತ್ತೊಮ್ಮೆ ಗುಡುಗಿದ್ದಾರೆ.

    ಮಂಗಳವಾರ ರಾತ್ರಿ 11.30ಕ್ಕೆ ಟ್ವೀಟ್ ಮಾಡಿರುವ ಪಾಟೀಲ್​, ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ, ಆತ್ಮಸಾಕ್ಷಿಯಾಗಿ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಹೊರತು, ಸಚಿವನಾಗುವುದಕ್ಕೆ ಯಾರದೋ ಕಾಲು ಹಿಡಿದು, ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನವೂ ಅಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಇದನ್ನೂ ಓದಿ: Web Exclusive|ಆರೋಗ್ಯ ಇಲಾಖೆಗೆ ಕೈಕೊಟ್ಟ 937 ಅಧಿಕಾರಿ, ನೌಕರರು

    ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿ ಬಹಳ ದಿನ ಉಳಿಯಲ್ಲವೆಂದು ನಿನ್ನೆಯಷ್ಟೇ ಯತ್ನಾಳ್​ ಹೇಳಿಕೆ ನೀಡಿದ್ದರು. ಈ ವಿಚಾರ ಬಿಜೆಪಿಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸಿಎಂ ಬಿಎಸ್​ವೈಗೂ ಇರಿಸು-ಮುರಿಸು ತಂದಿತ್ತು. ಯತ್ನಾಳ್​ ಅವರನ್ನ ಕರೆಸಿ ಮಾತಾಡ್ತಿನಿ ಎಂದು ಸಿಎಂ ಬಿಎಸ್​ವೈ ಹೇಳಿದ್ದರು. ನಿನ್ನೆ ಸಿಎಂ ರಾಜಕೀಯ ಕಾರ್ಯದರ್ಶಿ ಯತ್ನಾಳರನ್ನು ಭೇಟಿ ಮಾಡಿ ಮಾತನಾಡಿದ್ದರು.

    ಜಡ್ಜ್​ಗೆ ಬೆದರಿಕೆ ಪತ್ರ: ಷಡ್ಡಕನ ಸಿಕ್ಕಿಸಲು ಹೋಗಿ ಸಿಕ್ಕಿಬಿದ್ದ, ಆಸ್ತಿಗಾಗಿ ನಾದಿನಿ ಮೇಲೆ ಕಣ್ಣು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts